Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಂಬೈನಲ್ಲಿ ಬಾರ್ಬರ್ (ಕ್ಷೌರಿಕ) ಜಿಹಾದ್ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಿಲುಮೆ ಎಂಬ ಫೇಸ್‌ಬುಕ್ ಗ್ರೂಪ್ ಒಂದರಲ್ಲಿ ಉಮಾ ಶಂಕರ್ ಎಂಬಾತ ಫೋಟೋ ಹಂಚಿಕೊಂಡು ಹೀಗೆ ಬರೆದಿದ್ದಾರೆ..”ಮುಂಬೈನಲ್ಲಿ ಬಾರ್ಬರ್ ಜಿಹಾದ್… ಮಸೀದಿಗಳಲ್ಲಿ ಹಿಂದೂಗಳ ಗಡ್ಡ/ಕೂದಲು ಕತ್ತರಿಸುವಾಗ ಏಡ್ಸ್ ಬ್ಲೇಡ್‌ಗಳಿಂದ ಲಘುವಾಗಿ ಕತ್ತರಿಸುವ ಕೌಶಲ್ಯವನ್ನು ಕಲಿಸಲಾಗುತ್ತದೆ ಮತ್ತು ಈ ಕೆಲಸಕ್ಕೆ ಅವರು ಅಲ್ಲಿಂದ ಹಣವನ್ನು ಪಡೆಯುತ್ತಾರೆ ಎಂದು ಈ ಹುಡುಗರು ಪೊಲೀಸರಿಗೆ ತಿಳಿಸಿದರು.”

“ಇದು ಹೊಸಾ ಜಿಹಾದ್, ಈ ಮೂಲಕ ಹಿಂದೂಗಳನ್ನು ಏಡ್ಸ್ ರೋಗಿಗಳನ್ನಾಗಿ ಮಾಡಿ ಕೊಲ್ಲಲಾಗುತ್ತಿದೆ.
ಶಸ್ತ್ರಾಸ್ತ್ರಗಳಿಲ್ಲದ ಹೋರಾಟಗಾರರನ್ನು ಈ ಆಂತರಿಕ ಯುದ್ಧಕ್ಕೆ ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಹಿಂದೂಜರು ಶೇವಿಂಗ್ ಮತ್ತು ಕಟಿಂಗ್ ಅನ್ನು ಹಿಂದೂ ಕ್ಷೌರಿಕರಿಂದ ಮಾತ್ರ ಮಾಡಿಸಿಕೊಳ್ಳಿ, ಮಹಿಳೆಯರು ಕೂಡ ಹಿಂದೂಜರಿರುವ ಪಾರ್ಲರ್ಗೆ ಹೋಗಿ(.ನಾಗರಾಜ್ ಖೋಡೆ ನವರ ಪೇಜ್ ಇಂದ )”

ಇದೇ ರೀತಿಯ ಪೋಸ್ಟ್‌ಗಳನ್ನು ಅನೇಕ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಜುಲೈ 18,2013 ರಂದು ‘ಇಂಡಿಯಾ ಟಿವಿ‘ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದರಲ್ಲಿ ಇದೇ ವೈರಲ್ ಫೋಟೋ ಕಂಡು ಬಂದಿದೆ.

ವರದಿಯಲ್ಲಿ ಕ್ರೆಡಿಟ್ ಕಾರ್ಡ್ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಮುಂಬೈ ಪೋಲೀಸರು ಭೋಜ್ಪುರಿ ನಟ ಇರ್ಫಾನ್ ಖಾನ್ ಮತ್ತು ಆತನ ಸ್ನೇಹಿತ ಸಂಜಯ್ ಯಾದವ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. “ಕ್ರೆಡಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು ಮತ್ತು ಬಿಲ್ ಪುಸ್ತಕಗಳನ್ನು ಕದ್ದು, ನಂತರ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಮುಂಬೈ ಪೊಲೀಸರು ಬಿಹಾರದ ಛಾಪ್ರಾ ಜಿಲ್ಲೆಯಿಂದ ಬಂಧಿಸಿದ್ದಾರೆ” ಎಂದು ವರದಿ ವಿವರಿಸಿದೆ.

ಜುಲೈ 18, 2013ರಂದು ಎಬಿಪಿ ನ್ಯೂಸ್ ಮತ್ತು ಟಿವಿ9 ಗುಜರಾತ್ ಕೂಡ ಇದೇ ಪ್ರಕರಣದ ಕುರಿತು ವರದಿ ಮಾಡಿತ್ತು. ಎರಡೂ ವರದಿಗಳಲ್ಲೂ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಹೇಳಲಾಗಿತ್ತು.

ಮಾಧ್ಯಮ ವರದಿಗಳ ಪ್ರಕಾರ, ವೈರಲ್ ಫೋಟೋ 2013ರಲ್ಲಿ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಿದ್ದಾಗಿದೆ. ಅಲ್ಲದೆ, ಬಾರ್ಬರ್ ಜಿಹಾದ್, ಹಿಂದೂಗಳಿಗೆ ಏಡ್ಸ್ ಹರಡುವುದಕ್ಕೆ ಸಂಬಂಧಿಸಿದಲ್ಲ. ಸಾಮಾಜಿಕ ಜಾಲತಾಣದ ಸುಳ್ಳು ಪೋಸ್ಟ್‌ಗಳು ಮುಸ್ಲಿಮರ ವಿರುದ್ದ ಕೋಮು ವೈಷಮ್ಯ ಹರಡುವ ಉದ್ದೇಶಕ್ಕೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...