Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡುವ ವಿಡಿಯೋದ ಸ್ಕ್ರೀನ್ ಶಾಟ್ ಒಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, “ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅರಾಜಕತೆಯ ನಡುವೆ, ಮುಸ್ಲಿಮರು ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ವೈರಲ್ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಲಪಂಥೀಯ ಎಕ್ಸ್‌ ಖಾತೆ “हम लोग We The People (@ajaychauhan41)” ಮತ್ತೊಂದು ಭಯನಾಕ ಘಟನೆಯೊಂದು ಬಾಂಗ್ಲಾದೇಶದಿಂದ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದಾದ್ಯಂತ ಜಿಹಾದಿಗಳು ಹಿಂದೂ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಿದ್ದಾರೆ. ಈ ಪ್ರತಿಭಟನೆ ವಿದ್ಯಾರ್ಥಿ ಪ್ರತಿಭಟನೆಯಾಗಿ ಪ್ರಾರಂಭಗೊಂಡಿತ್ತು. ಈಗ ಹಿಂದೂಗಳ ಹತ್ಯಾಕಾಂಡವಾಗಿ ಬದಲಾಗಿದೆ” ಎಂದು ಬರೆದುಕೊಂಡಿದೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕ ಎಕ್ಸ್‌ ಬಳಕೆದಾರು ವೈರಲ್ ಸ್ಕ್ರೀಟ್ ಶಾಟ್ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

2023ರಲ್ಲಿ ಮಣಿಪುರದ ಘಟನೆ ಎಂದು ವಿಡಿಯೋ ವೈರಲ್ ಆಗಿತ್ತು

ಕಳೆದ ವರ್ಷ (2023) ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದ ವೇಳೆ ಈಗ ಸ್ಕ್ರೀನ್ ಶಾಟ್ ವೈರಲ್ ಆಗಿರುವ ವಿಡಿಯೋ ವ್ಯಾಪಕವಾಗಿ ಹರಿದಾಡಿತ್ತು. ಅನೇಕರು “ಮಣಿಪುರದಲ್ಲಿ ಕ್ರಿಶ್ಚಿಯನ್ ಯುವತಿಯನ್ನು ಅಪಹರಿಸಿರುವ ಹಿಂದೂಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅದನ್ನು ವಿಡಿಯೋ ಮಾಡಿ ಹಂಚಿದ್ದಾರೆ” ಎಂದು ಪ್ರತಿಪಾದಿಸಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ವೈರಲ್ ಆಗಿರುವ ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲೋ ಅಲ್ಲ, ಮಣಿಪುರದಲ್ಲೋ ಅಲ್ಲ. ನಮ್ಮದೇ ಬೆಂಗಳೂರಿನಲ್ಲಿ.

ಮೇ 28, 2021ರಂದು ಈ ಕುರಿತು ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ನಮಗೆ ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

“ಸಂತ್ರಸ್ತೆ ಜೊತೆಯಲ್ಲೇ ಇದ್ದಳು. ಉದ್ಯೋಗದ ಭರವಸೆ ನೀಡಿ ಆಕೆಯನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದವರು, ನಂತರ ಇಲ್ಲಿ ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದರು” ಎಂದು ವರದಿ ತಿಳಿಸಿದೆ.

ಜುಲೈ 8, 2021ರಂದು ಇಂಡಿಯನ್ ಎಕ್ಸ್‌ಪ್ರೆಸ್ ಸುದ್ದಿ ವೆಬ್‌ಸೈಟ್ ಇದೇ ಘಟನೆಗೆ ಸಂಬಂಧಿಸಿದಂತೆ ವರದಿ ಪ್ರಕಟಿಸಿತ್ತು. ಅದರಲ್ಲಿ “ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ವಾರಗಳಲ್ಲಿ ಪೊಲೀಸರು 1,019 ಪುಟಗಳ ಆರೋಪಪಟ್ಟಿ (ಚಾರ್ಜ್ ಶೀಟ್) 12 ಆರೋಪಿಗಳನ್ನು ಅದರಲ್ಲಿ ಹೆಸರಿಸಿದ್ದಾರೆ” ಎಂದು ಹೇಳಿತ್ತು.

“ಮೇ ಕೊನೆಯ ವಾರದಲ್ಲಿ, ಪೂರ್ವ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಚಿತ್ರಹಿಂಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಂಧಿಸಲಾಗಿತ್ತು. ಅಸ್ಸಾಂನಲ್ಲಿ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದರು” ಎಂದು ವರದಿ ತಿಳಿಸಿತ್ತು.

ಜುಲೈ 8, 2021ರಂದು ಈ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರು “ಬಾಂಗ್ಲಾದೇಶದ ಮಹಿಳೆಯ ದೌರ್ಜನ್ಯ ಪ್ರಕರಣದಲ್ಲಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 11 ಆರೋಪಿಗಳು ಮತ್ತು ಸಂತ್ರಸ್ತ ಮಹಿಳೆ ಬಾಂಗ್ಲಾದೇಶದವರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಸ್ಕೃತ ಮತ್ತ ವ್ಯವಸ್ಥಿತ ದೋಷಾರೋಪ ಪಟ್ಟಿಯನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ” ಎಂದಿದ್ದರು.

ಬಾಂಗ್ಲಾದೇಶದ ಮಹಿಳೆಯನ್ನು, ಬಾಂಗ್ಲಾದೇಶದವರೇ ಆದ ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆ ತಂದಿದ್ದರು. ಇಲ್ಲಿ ಆರೋಪಿಗಳ ಜೊತೆಯೇ ಮಹಿಳೆ ವಾಸವಿದ್ದಳು. ನಂತರ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ನಡೆದಿತ್ತು. ಬಳಿಕ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿದ್ದರು. ಆ ವಿಡಿಯೋ ಅಸ್ಸಾಂ ಮತ್ತು ಬಾಂಗ್ಲಾದೇಶದಲ್ಲಿ ವೈರಲ್ ಆದ ಬಳಿಕ, ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದರು. ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಮೇ 20, 2022ರಂದು ಬೆಂಗಳೂರಿನ 54ನೇ ಸಿಟಿ ಸಿವಿಲ್ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...