Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡುವ ವಿಡಿಯೋದ ಸ್ಕ್ರೀನ್ ಶಾಟ್ ಒಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, “ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅರಾಜಕತೆಯ ನಡುವೆ, ಮುಸ್ಲಿಮರು ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ವೈರಲ್ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಲಪಂಥೀಯ ಎಕ್ಸ್‌ ಖಾತೆ “हम लोग We The People (@ajaychauhan41)” ಮತ್ತೊಂದು ಭಯನಾಕ ಘಟನೆಯೊಂದು ಬಾಂಗ್ಲಾದೇಶದಿಂದ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದಾದ್ಯಂತ ಜಿಹಾದಿಗಳು ಹಿಂದೂ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಿದ್ದಾರೆ. ಈ ಪ್ರತಿಭಟನೆ ವಿದ್ಯಾರ್ಥಿ ಪ್ರತಿಭಟನೆಯಾಗಿ ಪ್ರಾರಂಭಗೊಂಡಿತ್ತು. ಈಗ ಹಿಂದೂಗಳ ಹತ್ಯಾಕಾಂಡವಾಗಿ ಬದಲಾಗಿದೆ” ಎಂದು ಬರೆದುಕೊಂಡಿದೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕ ಎಕ್ಸ್‌ ಬಳಕೆದಾರು ವೈರಲ್ ಸ್ಕ್ರೀಟ್ ಶಾಟ್ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

2023ರಲ್ಲಿ ಮಣಿಪುರದ ಘಟನೆ ಎಂದು ವಿಡಿಯೋ ವೈರಲ್ ಆಗಿತ್ತು

ಕಳೆದ ವರ್ಷ (2023) ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದ ವೇಳೆ ಈಗ ಸ್ಕ್ರೀನ್ ಶಾಟ್ ವೈರಲ್ ಆಗಿರುವ ವಿಡಿಯೋ ವ್ಯಾಪಕವಾಗಿ ಹರಿದಾಡಿತ್ತು. ಅನೇಕರು “ಮಣಿಪುರದಲ್ಲಿ ಕ್ರಿಶ್ಚಿಯನ್ ಯುವತಿಯನ್ನು ಅಪಹರಿಸಿರುವ ಹಿಂದೂಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅದನ್ನು ವಿಡಿಯೋ ಮಾಡಿ ಹಂಚಿದ್ದಾರೆ” ಎಂದು ಪ್ರತಿಪಾದಿಸಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ವೈರಲ್ ಆಗಿರುವ ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲೋ ಅಲ್ಲ, ಮಣಿಪುರದಲ್ಲೋ ಅಲ್ಲ. ನಮ್ಮದೇ ಬೆಂಗಳೂರಿನಲ್ಲಿ.

ಮೇ 28, 2021ರಂದು ಈ ಕುರಿತು ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ನಮಗೆ ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

“ಸಂತ್ರಸ್ತೆ ಜೊತೆಯಲ್ಲೇ ಇದ್ದಳು. ಉದ್ಯೋಗದ ಭರವಸೆ ನೀಡಿ ಆಕೆಯನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದವರು, ನಂತರ ಇಲ್ಲಿ ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದರು” ಎಂದು ವರದಿ ತಿಳಿಸಿದೆ.

ಜುಲೈ 8, 2021ರಂದು ಇಂಡಿಯನ್ ಎಕ್ಸ್‌ಪ್ರೆಸ್ ಸುದ್ದಿ ವೆಬ್‌ಸೈಟ್ ಇದೇ ಘಟನೆಗೆ ಸಂಬಂಧಿಸಿದಂತೆ ವರದಿ ಪ್ರಕಟಿಸಿತ್ತು. ಅದರಲ್ಲಿ “ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ವಾರಗಳಲ್ಲಿ ಪೊಲೀಸರು 1,019 ಪುಟಗಳ ಆರೋಪಪಟ್ಟಿ (ಚಾರ್ಜ್ ಶೀಟ್) 12 ಆರೋಪಿಗಳನ್ನು ಅದರಲ್ಲಿ ಹೆಸರಿಸಿದ್ದಾರೆ” ಎಂದು ಹೇಳಿತ್ತು.

“ಮೇ ಕೊನೆಯ ವಾರದಲ್ಲಿ, ಪೂರ್ವ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಚಿತ್ರಹಿಂಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಂಧಿಸಲಾಗಿತ್ತು. ಅಸ್ಸಾಂನಲ್ಲಿ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದರು” ಎಂದು ವರದಿ ತಿಳಿಸಿತ್ತು.

ಜುಲೈ 8, 2021ರಂದು ಈ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರು “ಬಾಂಗ್ಲಾದೇಶದ ಮಹಿಳೆಯ ದೌರ್ಜನ್ಯ ಪ್ರಕರಣದಲ್ಲಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 11 ಆರೋಪಿಗಳು ಮತ್ತು ಸಂತ್ರಸ್ತ ಮಹಿಳೆ ಬಾಂಗ್ಲಾದೇಶದವರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಸ್ಕೃತ ಮತ್ತ ವ್ಯವಸ್ಥಿತ ದೋಷಾರೋಪ ಪಟ್ಟಿಯನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ” ಎಂದಿದ್ದರು.

ಬಾಂಗ್ಲಾದೇಶದ ಮಹಿಳೆಯನ್ನು, ಬಾಂಗ್ಲಾದೇಶದವರೇ ಆದ ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆ ತಂದಿದ್ದರು. ಇಲ್ಲಿ ಆರೋಪಿಗಳ ಜೊತೆಯೇ ಮಹಿಳೆ ವಾಸವಿದ್ದಳು. ನಂತರ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ನಡೆದಿತ್ತು. ಬಳಿಕ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿದ್ದರು. ಆ ವಿಡಿಯೋ ಅಸ್ಸಾಂ ಮತ್ತು ಬಾಂಗ್ಲಾದೇಶದಲ್ಲಿ ವೈರಲ್ ಆದ ಬಳಿಕ, ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದರು. ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಮೇ 20, 2022ರಂದು ಬೆಂಗಳೂರಿನ 54ನೇ ಸಿಟಿ ಸಿವಿಲ್ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...