Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡುವ ವಿಡಿಯೋದ ಸ್ಕ್ರೀನ್ ಶಾಟ್ ಒಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, “ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅರಾಜಕತೆಯ ನಡುವೆ, ಮುಸ್ಲಿಮರು ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ವೈರಲ್ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಲಪಂಥೀಯ ಎಕ್ಸ್‌ ಖಾತೆ “हम लोग We The People (@ajaychauhan41)” ಮತ್ತೊಂದು ಭಯನಾಕ ಘಟನೆಯೊಂದು ಬಾಂಗ್ಲಾದೇಶದಿಂದ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದಾದ್ಯಂತ ಜಿಹಾದಿಗಳು ಹಿಂದೂ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಿದ್ದಾರೆ. ಈ ಪ್ರತಿಭಟನೆ ವಿದ್ಯಾರ್ಥಿ ಪ್ರತಿಭಟನೆಯಾಗಿ ಪ್ರಾರಂಭಗೊಂಡಿತ್ತು. ಈಗ ಹಿಂದೂಗಳ ಹತ್ಯಾಕಾಂಡವಾಗಿ ಬದಲಾಗಿದೆ” ಎಂದು ಬರೆದುಕೊಂಡಿದೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕ ಎಕ್ಸ್‌ ಬಳಕೆದಾರು ವೈರಲ್ ಸ್ಕ್ರೀಟ್ ಶಾಟ್ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

2023ರಲ್ಲಿ ಮಣಿಪುರದ ಘಟನೆ ಎಂದು ವಿಡಿಯೋ ವೈರಲ್ ಆಗಿತ್ತು

ಕಳೆದ ವರ್ಷ (2023) ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದ ವೇಳೆ ಈಗ ಸ್ಕ್ರೀನ್ ಶಾಟ್ ವೈರಲ್ ಆಗಿರುವ ವಿಡಿಯೋ ವ್ಯಾಪಕವಾಗಿ ಹರಿದಾಡಿತ್ತು. ಅನೇಕರು “ಮಣಿಪುರದಲ್ಲಿ ಕ್ರಿಶ್ಚಿಯನ್ ಯುವತಿಯನ್ನು ಅಪಹರಿಸಿರುವ ಹಿಂದೂಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅದನ್ನು ವಿಡಿಯೋ ಮಾಡಿ ಹಂಚಿದ್ದಾರೆ” ಎಂದು ಪ್ರತಿಪಾದಿಸಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ವೈರಲ್ ಆಗಿರುವ ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲೋ ಅಲ್ಲ, ಮಣಿಪುರದಲ್ಲೋ ಅಲ್ಲ. ನಮ್ಮದೇ ಬೆಂಗಳೂರಿನಲ್ಲಿ.

ಮೇ 28, 2021ರಂದು ಈ ಕುರಿತು ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ನಮಗೆ ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

“ಸಂತ್ರಸ್ತೆ ಜೊತೆಯಲ್ಲೇ ಇದ್ದಳು. ಉದ್ಯೋಗದ ಭರವಸೆ ನೀಡಿ ಆಕೆಯನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದವರು, ನಂತರ ಇಲ್ಲಿ ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದರು” ಎಂದು ವರದಿ ತಿಳಿಸಿದೆ.

ಜುಲೈ 8, 2021ರಂದು ಇಂಡಿಯನ್ ಎಕ್ಸ್‌ಪ್ರೆಸ್ ಸುದ್ದಿ ವೆಬ್‌ಸೈಟ್ ಇದೇ ಘಟನೆಗೆ ಸಂಬಂಧಿಸಿದಂತೆ ವರದಿ ಪ್ರಕಟಿಸಿತ್ತು. ಅದರಲ್ಲಿ “ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ವಾರಗಳಲ್ಲಿ ಪೊಲೀಸರು 1,019 ಪುಟಗಳ ಆರೋಪಪಟ್ಟಿ (ಚಾರ್ಜ್ ಶೀಟ್) 12 ಆರೋಪಿಗಳನ್ನು ಅದರಲ್ಲಿ ಹೆಸರಿಸಿದ್ದಾರೆ” ಎಂದು ಹೇಳಿತ್ತು.

“ಮೇ ಕೊನೆಯ ವಾರದಲ್ಲಿ, ಪೂರ್ವ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಚಿತ್ರಹಿಂಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಂಧಿಸಲಾಗಿತ್ತು. ಅಸ್ಸಾಂನಲ್ಲಿ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದರು” ಎಂದು ವರದಿ ತಿಳಿಸಿತ್ತು.

ಜುಲೈ 8, 2021ರಂದು ಈ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರು “ಬಾಂಗ್ಲಾದೇಶದ ಮಹಿಳೆಯ ದೌರ್ಜನ್ಯ ಪ್ರಕರಣದಲ್ಲಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 11 ಆರೋಪಿಗಳು ಮತ್ತು ಸಂತ್ರಸ್ತ ಮಹಿಳೆ ಬಾಂಗ್ಲಾದೇಶದವರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಸ್ಕೃತ ಮತ್ತ ವ್ಯವಸ್ಥಿತ ದೋಷಾರೋಪ ಪಟ್ಟಿಯನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ” ಎಂದಿದ್ದರು.

ಬಾಂಗ್ಲಾದೇಶದ ಮಹಿಳೆಯನ್ನು, ಬಾಂಗ್ಲಾದೇಶದವರೇ ಆದ ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆ ತಂದಿದ್ದರು. ಇಲ್ಲಿ ಆರೋಪಿಗಳ ಜೊತೆಯೇ ಮಹಿಳೆ ವಾಸವಿದ್ದಳು. ನಂತರ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ನಡೆದಿತ್ತು. ಬಳಿಕ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿದ್ದರು. ಆ ವಿಡಿಯೋ ಅಸ್ಸಾಂ ಮತ್ತು ಬಾಂಗ್ಲಾದೇಶದಲ್ಲಿ ವೈರಲ್ ಆದ ಬಳಿಕ, ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದರು. ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಮೇ 20, 2022ರಂದು ಬೆಂಗಳೂರಿನ 54ನೇ ಸಿಟಿ ಸಿವಿಲ್ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...