Homeಫ್ಯಾಕ್ಟ್‌ಚೆಕ್FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ರೈಲಿನ ತುಂಬಾ ಕಿಕ್ಕಿರಿದು ಜನರು ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗಿದೆ.

“ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋ ಮೂಲತಃ ಬಾಂಗ್ಲಾ ದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌‘ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಪೋಟೋ ಲಭ್ಯವಾಗಿದ್ದು, ಅದರ ಜೊತೆಗೆ “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ ಸಭೆ 2020ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು” ಎಂದು ಬರೆದುಕೊಳ್ಳಲಾಗಿದೆ.

ಶಟರ್‌ ಸ್ಟಾಕ್‘ ಎಂಬ ಇನ್ನೊಂದು ಪೋಟೋ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಫೋಟೋ ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಬರೆಯಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕೋಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಫೋಟೋಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಪ್ರತಿ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕೊಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...