Homeಫ್ಯಾಕ್ಟ್‌ಚೆಕ್FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ರೈಲಿನ ತುಂಬಾ ಕಿಕ್ಕಿರಿದು ಜನರು ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗಿದೆ.

“ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋ ಮೂಲತಃ ಬಾಂಗ್ಲಾ ದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌‘ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಪೋಟೋ ಲಭ್ಯವಾಗಿದ್ದು, ಅದರ ಜೊತೆಗೆ “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ ಸಭೆ 2020ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು” ಎಂದು ಬರೆದುಕೊಳ್ಳಲಾಗಿದೆ.

ಶಟರ್‌ ಸ್ಟಾಕ್‘ ಎಂಬ ಇನ್ನೊಂದು ಪೋಟೋ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಫೋಟೋ ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಬರೆಯಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕೋಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಫೋಟೋಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಪ್ರತಿ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕೊಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...