Homeಫ್ಯಾಕ್ಟ್‌ಚೆಕ್FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ರೈಲಿನ ತುಂಬಾ ಕಿಕ್ಕಿರಿದು ಜನರು ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗಿದೆ.

“ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋ ಮೂಲತಃ ಬಾಂಗ್ಲಾ ದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌‘ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಪೋಟೋ ಲಭ್ಯವಾಗಿದ್ದು, ಅದರ ಜೊತೆಗೆ “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ ಸಭೆ 2020ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು” ಎಂದು ಬರೆದುಕೊಳ್ಳಲಾಗಿದೆ.

ಶಟರ್‌ ಸ್ಟಾಕ್‘ ಎಂಬ ಇನ್ನೊಂದು ಪೋಟೋ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಫೋಟೋ ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಬರೆಯಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕೋಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಫೋಟೋಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಪ್ರತಿ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕೊಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...