Homeಫ್ಯಾಕ್ಟ್‌ಚೆಕ್FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ರೈಲಿನ ತುಂಬಾ ಕಿಕ್ಕಿರಿದು ಜನರು ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗಿದೆ.

“ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋ ಮೂಲತಃ ಬಾಂಗ್ಲಾ ದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌‘ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಪೋಟೋ ಲಭ್ಯವಾಗಿದ್ದು, ಅದರ ಜೊತೆಗೆ “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ ಸಭೆ 2020ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು” ಎಂದು ಬರೆದುಕೊಳ್ಳಲಾಗಿದೆ.

ಶಟರ್‌ ಸ್ಟಾಕ್‘ ಎಂಬ ಇನ್ನೊಂದು ಪೋಟೋ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಫೋಟೋ ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಬರೆಯಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕೋಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಫೋಟೋಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಪ್ರತಿ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕೊಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...