Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...