Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...