Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...