Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...