Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...