Homeಫ್ಯಾಕ್ಟ್‌ಚೆಕ್Fact Check : 'ಮೋದಿ ದೇಶದ್ರೋಹಿ' ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

Fact Check : ‘ಮೋದಿ ದೇಶದ್ರೋಹಿ’ ಎಂಬ ಭಾಗ ಕೈಬಿಟ್ಟು ವೈಕೋ ಹೇಳಿಕೆ ಹಂಚಿಕೊಂಡ ANI

- Advertisement -
- Advertisement -

ತಮಿಳುನಾಡಿನ ಮರು ಮಳರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪ್ರಧಾನ ಕಾರ್ಯದರ್ಶಿ ವೈಯಾಪುರಿ ಗೋಪಾಲಸಾಮಿ ಅಥವಾ ವೈಕೋ ಅವರು ಏಪ್ರಿಲ್ 3ರಂದು ಶ್ರೀಲಂಕಾದ ಕಚ್ಚತೀವು ದ್ವೀಪದ ಸುತ್ತ ನಡೆಯುತ್ತಿರುವ ವಿವಾದದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದರು. ಎಂಡಿಎಂಕೆ ಪಕ್ಷವು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ)ಯ ಮಿತ್ರ ಪಕ್ಷವಾಗಿದೆ. ಡಿಎಂಕೆ ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿದೆ.

ವೈಕೋ ಅವರ ಹೇಳಿಕೆಯ 10 ಸೆಕೆಂಡ್‌ನ ವಿಡಿಯೋವನ್ನು ಏಪ್ರಿಲ್ 3ರಂದು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪ್ರಕಟಿಸಿತ್ತು. ವಿಡಿಯೋದಲ್ಲಿ ” ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು..” ಎಂದು ವೈಕೋ ಹೇಳಿರುವುದನ್ನು ಕಾಣಬಹುದು.

ಎಎನ್‌ಐ ಎಕ್ಸ್ ಪೋಸ್ಟನ್ನು ರೀ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ತಮಿಳುನಾಡಿನ ಜನರು ಕಡ್ಡಾಯವಾಗಿ ಇದನ್ನು ಆಲಿಸಬೇಕು” ಎಂದು ಬರೆದುಕೊಂಡಿದ್ದರು.

ಎಎನ್‌ಐ ಎಕ್ಸ್‌ ಪೋಸ್ಟ್‌ ಆಧರಿಸಿ ಹಿಂದುಸ್ತಾನ್ ಟೈಮ್ಸ್, ನ್ಯೂಸ್ 18, ಸಿಎನ್‌ಎನ್ ಮತ್ತು ನ್ಯೂಸ್ 9 ಸೇರಿದಂತೆ ಅನೇಕ ಮುಖ್ಯ ವಾಹಿನಿ ಮಾಧ್ಯಮಳು ಸುದ್ದಿ ಪ್ರಕಟಿಸಿದ್ದವು. ಎಲ್ಲಾ ಸುದ್ದಿಗಳಲ್ಲೂ ಎಎನ್‌ಐ ಹಂಚಿಕೊಂಡ ವೈಕೋ ಅವರ 10 ಸೆಕೆಂಡ್‌ನ ವಿಡಿಯೋದ ಹೇಳಿಕೆಯನ್ನು ಶೀರ್ಷಿಕೆಯಲ್ಲಿ ಹಾಕಲಾಗಿತ್ತು.

ನ್ಯೂಸ್ 18ನ ನಿರೂಪಕ ರಾಹುಲ್ ಶಿವಶಂಕರ್ ಎಕ್ಸ್‌ ಪೋಸ್ಟ್‌ ಅನ್ನು ರೀ ಟ್ವೀಟ್ ಮಾಡಿ ” ಮತ್ತೆ ಅವರು ಯಾಕೆ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದಾರೆ? ಅನುಕೂಲತೆಯ ರಾಜಕೀಯಕ್ಕೆ ಮಿತಿಯಿಲ್ಲವೇ? ಎಂದು ಪ್ರಶ್ನಿಸಿದ್ದರು.

ಬಿಜೆಪಿ ರಾಷ್ಟ್ರೀಯ ವಕ್ತಾರ ಕೆ ಕೇಶವನ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಎಎನ್‌ಐ ವಿಡಿಯೋವನ್ನು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ವೈಕೋ ಅವರು ಕಾಂಗ್ರೆಸ್‌ ವಿರುದ್ದವೇ ಹೇಳಿಕೆ ನೀಡಿದ್ದಾರೆ ಎಂಬರ್ಥದಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ನಾವು ಮೂಲ ವಿಡಿಯೋ ಹುಡುಕಾಡಿದಾಗ ತಮಿಳಿನ ಸನ್‌ ನ್ಯೂಸ್ ಎಕ್ಸ್‌ ಖಾತೆಯಲ್ಲಿ ವೈಕೋ ಅವರ ಹೇಳಿಕೆಯ 37 ಸೆಕೆಂಡ್‌ನ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಿರುವುದು ಕಂಡು ಬಂದಿದೆ. ವಿಡಿಯೋದಲ್ಲಿ “ಆ ಸಮಯದಲ್ಲಿ ಕಾಂಗ್ರೆಸ್ ಪ್ರತಿ ರಂಗದಲ್ಲೂ ತಮಿಳುನಾಡಿಗೆ ದ್ರೋಹ ಬಗೆದಿತ್ತು. ಆ ನಂತರ… ಈ ಹತ್ತು ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಆದರೆ, ಅವರು ದೇಶದ್ರೋಹಿ, ಅವರು ತಮಿಳುನಾಡಿಗೆ ದ್ರೋಹ ಮಾಡಿದರು, ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು” ಎಂದು ಹೇಳಿದ್ದಾರೆ.

ಇದರಿಂದ ನಮಗೆ ತಿಳಿದ್ದದ್ದು ಏನೆಂದರೆ, ಎಎನ್‌ಐ ಸುದ್ದಿ ಸಂಸ್ಥೆ “ಮೋದಿ ದೇಶ ದ್ರೋಹಿ, ಕಾಂಗ್ರೆಸ್ ತಮಿಳುನಾಡಿಗೆ ದ್ರೋಹವೆಸಗಿದೆ ಎಂಬ ವೈಕೋ ಹೇಳಿಕೆಯ 37 ಸೆಕೆಂಡ್‌ನ ವಿಡಿಯೋವನ್ನು ಕಟ್ ಮಾಡಿ, “ಕಾಂಗ್ರೆಸ್‌ ತಮಿಳುನಾಡಿಗೆ ದ್ರೋಹವೆಸಗಿದೆ’ ಎಂಬ 10 ಸೆಕೆಂಡ್‌ನ ವಿಡಿಯೋವನ್ನು ಮಾತ್ರ ಪೋಸ್ಟ್ ಮಾಡಿದೆ.

ಏಪ್ರಿಲ್ 3ರಂದು ಬುಧವಾರ ಡಿಎಂಕೆ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ಮಾಡುವಾಗ ವೈಕೋ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ತಮ್ಮ ಭಾಷಣದ ವೇಳೆಯೂ ಅವರು ಬಿಜೆಪಿಯನ್ನು ಟೀಕಿಸಿದ್ದರು, “ಹಿಂದುತ್ವ ಶಕ್ತಿಗಳನ್ನು ಸೋಲಿಸಬೇಕಾಗಿದೆ. ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕೇಂದ್ರದ ಬಿಜೆಪಿ ನಾಯಕ ತಮಿಳುನಾಡಿನ ದ್ರಾವಿಡ ಸರ್ಕಾರವನ್ನು ಉರುಳಿಸುವುದಾಗಿ ಘೋಷಿಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಜನರು ಪಣ ತೊಡಬೇಕು” ಎಂದಿದ್ದರು.

ಎಎನ್‌ಐ ಕಟ್ ಮಾಡಿದ್ದ ವೈಕೋ ಹೇಳಿಕೆಯ ಉಳಿದ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ಏಪ್ರಿಲ್ 3ರಂದು ಹಂಚಿಕೊಂಡಿದ್ದರು. ” ಈ 10 ವರ್ಷಗಳು ನರೇಂದ್ರ ಮೋದಿಯವರಿಗೆ ಪರೀಕ್ಷಾ ಸಮಯವಾಗಿತ್ತು. ಅವರೊಬ್ಬ ದೇಶದ್ರೋಹಿ. ಅವರು ತಮಿಳುನಾಡಿಗೆ ದ್ರೋಹ ಮಾಡಿದರು. ಭಾರತಕ್ಕೆ ದ್ರೋಹ ಮಾಡಿದರು, ಶ್ರೀಲಂಕಾಕ್ಕೆ ದ್ರೋಹ ಮಾಡಿದರು : ಎಂಡಿಎಂಕೆ ಸಂಸ್ಥಾಪಕ ವೈಕೋ” ಎಂದು ಬರೆದುಕೊಂಡಿದ್ದರು.

ಕೊನೆಯದಾಗಿ, ಈ ಫ್ಯಾಕ್ಟ್‌ಚೆಕ್ ಮೂಲಕ ನಾವು ಹೇಳುತ್ತಿರುವುದು ಎಎನ್‌ಐ ವೈಕೋ ಅವರು ಕಾಂಗ್ರೆಸ್ ಕುರಿತು ನೀಡಿರುವ ಹೇಳಿಕೆಯನ್ನು ಮಾತ್ರ ಪ್ರಕಟಿಸಿ, ಪ್ರಧಾನಿ ಮೋದಿ ಕುರಿತು ನೀಡಿರುವ ಹೇಳಿಕೆಯನ್ನು ಮರೆ ಮಾಚಿದೆ ಎಂಬುದಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ಮುಸ್ಲಿಮರು ಬಸ್‌ ಮೇಲೆ ಕಲ್ಲು ತೂರಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...