Homeಫ್ಯಾಕ್ಟ್‌ಚೆಕ್FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

- Advertisement -
- Advertisement -

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌ ಮೂಲಕ ವಿಡಂಬನಾತ್ಮಕ ಅಭಿಯಾನವಾಗಿ ಪ್ರಾರಂಭವಾದದ್ದು ಆನ್‌ಲೈನ್ ಆಂದೋಲನವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವಂತೆ ಕಾಣುತ್ತಿದೆ.

ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಈ ಸಿಜೆಪಿಯ ಸ್ಥಾಪಕರ ಅಭಿಜೀತ್ ದಿಪ್ಕೆ ಎಂಬಾತ ಎನ್ನಲಾಗ್ತಿದೆ. 30 ವರ್ಷ ವಯಸ್ಸಿನ ಅಭಿಜೀತ್ ದಿಪ್ಕೆ ಪುಣೆಯಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ್ದು, ಪ್ರಸ್ತುತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ ಎಂದು ಮೇ 22ರಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿಜೆಪಿಗೆ ಇಂಟರ್‌ನೆಟ್‌ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿ, ಅದು ಆಡಳಿತವನ್ನು ಮುಖ್ಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಶುರು ಮಾಡುತ್ತಿದ್ದಂತೆ, ಬೆಜೆಪಿ ಬೆಂಬಲಿಗರು ಅಲರ್ಟ್ ಆಗಿದ್ದು, ಸಿಜೆಪಿ ಪಾಕಿಸ್ತಾನ ಮೂಲದ್ದು, ದೇಶದ ಯುವಜನರನ್ನು ಪ್ರಚೋದಿಸಿ ಆಂತರಿಕವಾಗಿ ದಂಗೆಯೆಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಬಿಜೆಪಿ, ಸಂಘಪರಿವಾರವನ್ನು ವಿರೋಧಿಸುವವರು ದೇಶದ್ರೋಹಿಗಳು ಎಂಬ ತಮ್ಮ ಎಂದಿನ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಬೆಂಬಲಿಗರು, ಸಿಜೆಪಿ ಪಾಕಿಸ್ತಾನ ಮೂಲದ್ದು, ಅದನ್ನು ಬೆಂಬಲಿಸುವವರು ದೇಶದ್ರೋಹಿಗಳು ಎಂಬಂತಹ ಒಂದು ಪ್ರಚಾರವನ್ನು ಇಂಟರ್‌ನೆಟ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಕೈಗೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರು ಸಿಜೆಪಿಯ ಫಾಲೋವರ್ಸ್‌ಗಳ ಪೈ ಚಾರ್ಟ್ ಹೊಂದಿರುವ ಗ್ರಾಫಿಕ್ ಅನ್ನು 2026ರ ಮೇ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಪೈಕಿ 49% ಮಂದಿ ಪಾಕಿಸ್ತಾನದವರು, 14% ಅಮೆರಿಕದವರು, 14% ಬಾಂಗ್ಲಾದೇಶದವರು ಮತ್ತು ಕೇವಲ 9% ಮಾತ್ರ ಭಾರತದವರು, ಉಳಿದವರು ಯುನೈಟೆಡ್ ಕಿಂಗ್‌ಡಂ (ಯುಕೆ) ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಇಯವರು ಎಂದು ಹೇಳಿಕೊಂಡಿದ್ದಾರೆ. ಬಗ್ಗಾ ಸಿಜೆಪಿಯನ್ನು ‘ಪಾಕಿಸ್ತಾನ ಜನತಾ ಪಕ್ಷ’ ಎಂದು ತಮ್ಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ರಿಷಿ ಬಾಗ್ರಿ ಕೂಡ 2026ರ ಮೇ 21ರಂದು ಅದೇ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿ “ಜಿರಳೆ ಜನತಾ ಪಕ್ಷದ ಸತ್ಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಮೆರಿಕದ ನಾಗರಿಕರು ಇದರ ಇನ್‌ಸ್ಟಾ ಫಾಲೋವರ್ಸ್‌ಗಳಲ್ಲಿ 77% ರಷ್ಟಿದ್ದಾರೆ. ಭಾರತದವರು ಕೇವಲ 9% ರಷ್ಟನ್ನು ಮಾತ್ರ” ಎಂದು ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್ ಪತ್ರಕರ್ತೆ ಚಿತ್ರಾ ತ್ರಿಪಾಠಿ ಕೂಡ ಫೇಸ್‌ಬುಕ್‌ನಲ್ಲಿ ವೈರಲ್ ಆದ ಹೇಳಿಕೆಯನ್ನು ಪುಷ್ಟೀಕರಿಸಿದ್ದರು. ಬಗ್ಗಾ ಅವರ ಮಾತುಗಳನ್ನು ಉಲ್ಲೇಖಿಸಿ, “ಕಾಕ್ರೋಚ್ ಜನತಾ ಪಕ್ಷದ ಅರ್ಧದಷ್ಟು ಫಾಲೋವರ್ಸ್ ಪಾಕಿಸ್ತಾನಿಗಳು” ಎಂದು ಬರೆದುಕೊಂಡಿದ್ದರು.

ಝೀ-ಮಾಲೀಕತ್ವದ ಸುದ್ದಿ ಸಂಸ್ಥೆ WION ಕೂಡ ಸಿಜೆಪಿಯ ಇನ್‌ಸ್ಟಾಗ್ರಾಮ್ ಪೇಜ್‌ನ “ವಿದೇಶಿ ಅನುಯಾಯಿಗಳ” ಬಗ್ಗೆ ವರದಿಯನ್ನು ಪ್ರಕಟಿಸಿತ್ತು. “ಪಾಕಿಸ್ತಾನ ‘ಜಿರಳೆ ಜನತಾ ಪಕ್ಷ’ದತ್ತ ದೃಷ್ಟಿ ಹಾಯಿಸಿದೆಯೇ? ನೆಟಿಜನ್‌ಗಳು ಹೆಚ್ಚಿನ ಸಂಖ್ಯೆಯ ಪಾಕ್, ಬಾಂಗ್ಲಾದೇಶ ಮತ್ತು ಟರ್ಕಿ ಮೂಲದ ಫಾಲೋವರ್ಸ್‌ಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿತ್ತು.

ಇದೇ ರೀತಿಯ ಪೋಸ್ಟ್‌ಗಳನ್ನು ಹಲವು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಎಂಬ ಕುತೂಹಲದಿಂದ ನಾವು ಈ ಬಗ್ಗೆ ಮಾಹಿತಿಯನ್ನು ಹುಡುಕಿದ್ದೆವು. ಈ ವೇಳೆ ದೇಶದ ಪ್ರಸಿದ್ದ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ altnews.in ಈ ಬಗ್ಗೆ ಸತ್ಯಾಸತ್ಯತೆಯ ವರದಿ ಪ್ರಕಟಿಸಿರುವುದು ಗಮನಿಸಿದ್ದೇವೆ.

altnews.in ತನ್ನ ವರದಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ನಾವು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಸಂಪರ್ಕಿಸಿದ್ದೇವೆ. ಈ ವೇಳೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನ ಫಾಲೋವರ್ಸ್‌ಗಳ ಮಾಹಿತಿಯನ್ನು ಸ್ಕ್ರೀನ್‌ ರೆಕಾರ್ಡ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅದರ ಪ್ರಕಾರ, ಸಿಜೆಪಿ ಇನ್‌ಸ್ಟಾಗ್ರಾಮ್‌ ಪೇಜ್‌ನ ಫಾಲೋವರ್ಸ್‌ಗಳ ಪೈಕಿ ಶೇಕಡ 94.7ರಷ್ಟು ಜನರು ಭಾರತೀಯರು, 1% ಯುಎಸ್‌ದವರು, 0.7% ಯುಕೆ ಮತ್ತು ತಲಾ 0.6% ಜನರು ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನವರು ಎಂದು ಹೇಳಿದೆ.

altnews.in ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋ ಕೆಳಗೆ ನೋಡಬಹುದು

ಗಮನಾರ್ಹವಾಗಿ, ಅಭೀಜಿತ್ ದೀಪ್ಕೆ ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋದಲ್ಲಿ ಸಿಜೆಪಿಯ ಹೆಚ್ಚಿನ ಫಾಲೋವರ್ಸ್‌ಗಳನ್ನು ದೇಶಗಳಾಗಿ ವಿಂಗಡಿಸಿ ನೋಡಿದಾಗ ಅದರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ಕಾಣಿಸುವುದಿಲ್ಲ. ವೈರಲ್ ಹೇಳಿಕೆಗಳನ್ನು ನಿರಾಕರಿಸಲು ದೀಪ್ಕೆ ಸ್ವತಃ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಮೇ 21 ರಂದು ಸಂಜೆ 5:17ಕ್ಕೆ ಅವರು ಅಪ್ಲೋಡ್ ಮಾಡಿದ ಸ್ಕ್ರೀನ್‌ಶಾಟ್‌ನಲ್ಲಿ, ಇದೇ ರೀತಿಯ ಅಂಕಿ ಅಂಶಗಳನ್ನು ಕಾಣಬಹುದು.

ಮೇ 23ರಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸುವ ವೇಳೆಯೂ ಅಭೀಜಿತ್ ಮೇಲಿನ ಸ್ಕ್ರೀನ್ ರೆಕಾರ್ಡ್ ಹಂಚಿಕೊಂಡಿದ್ದರು. “ನಮ್ಮ ಖಾತೆ ಹ್ಯಾಕ್ ಆಗುವ ಮೊದಲು ನಾವು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಮ್ಮ ಪ್ರೇಕ್ಷಕರ ಜನಸಂಖ್ಯಾಶಾಸ್ತ್ರದ ಸ್ಕ್ರೀನ್ ರೆಕಾರ್ಡಿಂಗ್ ಇದು. ಶೇ. 94ಕ್ಕಿಂತ ಹೆಚ್ಚು ಪ್ರೇಕ್ಷಕರು ಭಾರತದವರು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಯುವಕರನ್ನು ಪಾಕಿಸ್ತಾನಿ ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದರು.

ಕಿರಣ್ ರಿಜಿಜು ಅವರು, “ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಯಾಯಿಗಳನ್ನು ಹುಡುಕುತ್ತಿರುವವರ ಬಗ್ಗೆ ನನಗೆ ವಿಷಾದವಿದೆ” ಎಂದು ಯಾರನ್ನೂ ಉಲ್ಲೇಖಿಸದೆ ಮೇ 23ರಂದು ಪೋಸ್ಟ್ ಹಾಕಿದ್ದರು.

ಒಟ್ಟಿನಲ್ಲಿ, ಸಿಜೆಪಿಯ ಫಾಲೋವರ್ಸ್‌ಗಳಲ್ಲಿ ಹೆಚ್ಚಿನವರು ಪಾಕಿಸ್ತಾನಿಗಳು ಎಂಬ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರ ಹೇಳಿಕೆಯನ್ನು ಇತರ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ, ಅದು ಸುಳ್ಳು. ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳಲ್ಲಿ ಶೇಕಡ 90ರಷ್ಟು ಮಂದಿ ಭಾರತೀಯರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...