Homeಫ್ಯಾಕ್ಟ್‌ಚೆಕ್FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

- Advertisement -
- Advertisement -

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌ ಮೂಲಕ ವಿಡಂಬನಾತ್ಮಕ ಅಭಿಯಾನವಾಗಿ ಪ್ರಾರಂಭವಾದದ್ದು ಆನ್‌ಲೈನ್ ಆಂದೋಲನವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವಂತೆ ಕಾಣುತ್ತಿದೆ.

ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಈ ಸಿಜೆಪಿಯ ಸ್ಥಾಪಕರ ಅಭಿಜೀತ್ ದಿಪ್ಕೆ ಎಂಬಾತ ಎನ್ನಲಾಗ್ತಿದೆ. 30 ವರ್ಷ ವಯಸ್ಸಿನ ಅಭಿಜೀತ್ ದಿಪ್ಕೆ ಪುಣೆಯಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ್ದು, ಪ್ರಸ್ತುತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ ಎಂದು ಮೇ 22ರಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿಜೆಪಿಗೆ ಇಂಟರ್‌ನೆಟ್‌ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿ, ಅದು ಆಡಳಿತವನ್ನು ಮುಖ್ಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಶುರು ಮಾಡುತ್ತಿದ್ದಂತೆ, ಬೆಜೆಪಿ ಬೆಂಬಲಿಗರು ಅಲರ್ಟ್ ಆಗಿದ್ದು, ಸಿಜೆಪಿ ಪಾಕಿಸ್ತಾನ ಮೂಲದ್ದು, ದೇಶದ ಯುವಜನರನ್ನು ಪ್ರಚೋದಿಸಿ ಆಂತರಿಕವಾಗಿ ದಂಗೆಯೆಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಬಿಜೆಪಿ, ಸಂಘಪರಿವಾರವನ್ನು ವಿರೋಧಿಸುವವರು ದೇಶದ್ರೋಹಿಗಳು ಎಂಬ ತಮ್ಮ ಎಂದಿನ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಬೆಂಬಲಿಗರು, ಸಿಜೆಪಿ ಪಾಕಿಸ್ತಾನ ಮೂಲದ್ದು, ಅದನ್ನು ಬೆಂಬಲಿಸುವವರು ದೇಶದ್ರೋಹಿಗಳು ಎಂಬಂತಹ ಒಂದು ಪ್ರಚಾರವನ್ನು ಇಂಟರ್‌ನೆಟ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಕೈಗೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರು ಸಿಜೆಪಿಯ ಫಾಲೋವರ್ಸ್‌ಗಳ ಪೈ ಚಾರ್ಟ್ ಹೊಂದಿರುವ ಗ್ರಾಫಿಕ್ ಅನ್ನು 2026ರ ಮೇ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಪೈಕಿ 49% ಮಂದಿ ಪಾಕಿಸ್ತಾನದವರು, 14% ಅಮೆರಿಕದವರು, 14% ಬಾಂಗ್ಲಾದೇಶದವರು ಮತ್ತು ಕೇವಲ 9% ಮಾತ್ರ ಭಾರತದವರು, ಉಳಿದವರು ಯುನೈಟೆಡ್ ಕಿಂಗ್‌ಡಂ (ಯುಕೆ) ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಇಯವರು ಎಂದು ಹೇಳಿಕೊಂಡಿದ್ದಾರೆ. ಬಗ್ಗಾ ಸಿಜೆಪಿಯನ್ನು ‘ಪಾಕಿಸ್ತಾನ ಜನತಾ ಪಕ್ಷ’ ಎಂದು ತಮ್ಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ರಿಷಿ ಬಾಗ್ರಿ ಕೂಡ 2026ರ ಮೇ 21ರಂದು ಅದೇ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿ “ಜಿರಳೆ ಜನತಾ ಪಕ್ಷದ ಸತ್ಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಮೆರಿಕದ ನಾಗರಿಕರು ಇದರ ಇನ್‌ಸ್ಟಾ ಫಾಲೋವರ್ಸ್‌ಗಳಲ್ಲಿ 77% ರಷ್ಟಿದ್ದಾರೆ. ಭಾರತದವರು ಕೇವಲ 9% ರಷ್ಟನ್ನು ಮಾತ್ರ” ಎಂದು ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್ ಪತ್ರಕರ್ತೆ ಚಿತ್ರಾ ತ್ರಿಪಾಠಿ ಕೂಡ ಫೇಸ್‌ಬುಕ್‌ನಲ್ಲಿ ವೈರಲ್ ಆದ ಹೇಳಿಕೆಯನ್ನು ಪುಷ್ಟೀಕರಿಸಿದ್ದರು. ಬಗ್ಗಾ ಅವರ ಮಾತುಗಳನ್ನು ಉಲ್ಲೇಖಿಸಿ, “ಕಾಕ್ರೋಚ್ ಜನತಾ ಪಕ್ಷದ ಅರ್ಧದಷ್ಟು ಫಾಲೋವರ್ಸ್ ಪಾಕಿಸ್ತಾನಿಗಳು” ಎಂದು ಬರೆದುಕೊಂಡಿದ್ದರು.

ಝೀ-ಮಾಲೀಕತ್ವದ ಸುದ್ದಿ ಸಂಸ್ಥೆ WION ಕೂಡ ಸಿಜೆಪಿಯ ಇನ್‌ಸ್ಟಾಗ್ರಾಮ್ ಪೇಜ್‌ನ “ವಿದೇಶಿ ಅನುಯಾಯಿಗಳ” ಬಗ್ಗೆ ವರದಿಯನ್ನು ಪ್ರಕಟಿಸಿತ್ತು. “ಪಾಕಿಸ್ತಾನ ‘ಜಿರಳೆ ಜನತಾ ಪಕ್ಷ’ದತ್ತ ದೃಷ್ಟಿ ಹಾಯಿಸಿದೆಯೇ? ನೆಟಿಜನ್‌ಗಳು ಹೆಚ್ಚಿನ ಸಂಖ್ಯೆಯ ಪಾಕ್, ಬಾಂಗ್ಲಾದೇಶ ಮತ್ತು ಟರ್ಕಿ ಮೂಲದ ಫಾಲೋವರ್ಸ್‌ಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿತ್ತು.

ಇದೇ ರೀತಿಯ ಪೋಸ್ಟ್‌ಗಳನ್ನು ಹಲವು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಎಂಬ ಕುತೂಹಲದಿಂದ ನಾವು ಈ ಬಗ್ಗೆ ಮಾಹಿತಿಯನ್ನು ಹುಡುಕಿದ್ದೆವು. ಈ ವೇಳೆ ದೇಶದ ಪ್ರಸಿದ್ದ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ altnews.in ಈ ಬಗ್ಗೆ ಸತ್ಯಾಸತ್ಯತೆಯ ವರದಿ ಪ್ರಕಟಿಸಿರುವುದು ಗಮನಿಸಿದ್ದೇವೆ.

altnews.in ತನ್ನ ವರದಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ನಾವು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಸಂಪರ್ಕಿಸಿದ್ದೇವೆ. ಈ ವೇಳೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನ ಫಾಲೋವರ್ಸ್‌ಗಳ ಮಾಹಿತಿಯನ್ನು ಸ್ಕ್ರೀನ್‌ ರೆಕಾರ್ಡ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅದರ ಪ್ರಕಾರ, ಸಿಜೆಪಿ ಇನ್‌ಸ್ಟಾಗ್ರಾಮ್‌ ಪೇಜ್‌ನ ಫಾಲೋವರ್ಸ್‌ಗಳ ಪೈಕಿ ಶೇಕಡ 94.7ರಷ್ಟು ಜನರು ಭಾರತೀಯರು, 1% ಯುಎಸ್‌ದವರು, 0.7% ಯುಕೆ ಮತ್ತು ತಲಾ 0.6% ಜನರು ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನವರು ಎಂದು ಹೇಳಿದೆ.

altnews.in ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋ ಕೆಳಗೆ ನೋಡಬಹುದು

ಗಮನಾರ್ಹವಾಗಿ, ಅಭೀಜಿತ್ ದೀಪ್ಕೆ ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋದಲ್ಲಿ ಸಿಜೆಪಿಯ ಹೆಚ್ಚಿನ ಫಾಲೋವರ್ಸ್‌ಗಳನ್ನು ದೇಶಗಳಾಗಿ ವಿಂಗಡಿಸಿ ನೋಡಿದಾಗ ಅದರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ಕಾಣಿಸುವುದಿಲ್ಲ. ವೈರಲ್ ಹೇಳಿಕೆಗಳನ್ನು ನಿರಾಕರಿಸಲು ದೀಪ್ಕೆ ಸ್ವತಃ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಮೇ 21 ರಂದು ಸಂಜೆ 5:17ಕ್ಕೆ ಅವರು ಅಪ್ಲೋಡ್ ಮಾಡಿದ ಸ್ಕ್ರೀನ್‌ಶಾಟ್‌ನಲ್ಲಿ, ಇದೇ ರೀತಿಯ ಅಂಕಿ ಅಂಶಗಳನ್ನು ಕಾಣಬಹುದು.

ಮೇ 23ರಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸುವ ವೇಳೆಯೂ ಅಭೀಜಿತ್ ಮೇಲಿನ ಸ್ಕ್ರೀನ್ ರೆಕಾರ್ಡ್ ಹಂಚಿಕೊಂಡಿದ್ದರು. “ನಮ್ಮ ಖಾತೆ ಹ್ಯಾಕ್ ಆಗುವ ಮೊದಲು ನಾವು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಮ್ಮ ಪ್ರೇಕ್ಷಕರ ಜನಸಂಖ್ಯಾಶಾಸ್ತ್ರದ ಸ್ಕ್ರೀನ್ ರೆಕಾರ್ಡಿಂಗ್ ಇದು. ಶೇ. 94ಕ್ಕಿಂತ ಹೆಚ್ಚು ಪ್ರೇಕ್ಷಕರು ಭಾರತದವರು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಯುವಕರನ್ನು ಪಾಕಿಸ್ತಾನಿ ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದರು.

ಕಿರಣ್ ರಿಜಿಜು ಅವರು, “ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಯಾಯಿಗಳನ್ನು ಹುಡುಕುತ್ತಿರುವವರ ಬಗ್ಗೆ ನನಗೆ ವಿಷಾದವಿದೆ” ಎಂದು ಯಾರನ್ನೂ ಉಲ್ಲೇಖಿಸದೆ ಮೇ 23ರಂದು ಪೋಸ್ಟ್ ಹಾಕಿದ್ದರು.

ಒಟ್ಟಿನಲ್ಲಿ, ಸಿಜೆಪಿಯ ಫಾಲೋವರ್ಸ್‌ಗಳಲ್ಲಿ ಹೆಚ್ಚಿನವರು ಪಾಕಿಸ್ತಾನಿಗಳು ಎಂಬ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರ ಹೇಳಿಕೆಯನ್ನು ಇತರ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ, ಅದು ಸುಳ್ಳು. ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳಲ್ಲಿ ಶೇಕಡ 90ರಷ್ಟು ಮಂದಿ ಭಾರತೀಯರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....