Homeಫ್ಯಾಕ್ಟ್‌ಚೆಕ್FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

- Advertisement -
- Advertisement -

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌ ಮೂಲಕ ವಿಡಂಬನಾತ್ಮಕ ಅಭಿಯಾನವಾಗಿ ಪ್ರಾರಂಭವಾದದ್ದು ಆನ್‌ಲೈನ್ ಆಂದೋಲನವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವಂತೆ ಕಾಣುತ್ತಿದೆ.

ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಈ ಸಿಜೆಪಿಯ ಸ್ಥಾಪಕರ ಅಭಿಜೀತ್ ದಿಪ್ಕೆ ಎಂಬಾತ ಎನ್ನಲಾಗ್ತಿದೆ. 30 ವರ್ಷ ವಯಸ್ಸಿನ ಅಭಿಜೀತ್ ದಿಪ್ಕೆ ಪುಣೆಯಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ್ದು, ಪ್ರಸ್ತುತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ ಎಂದು ಮೇ 22ರಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿಜೆಪಿಗೆ ಇಂಟರ್‌ನೆಟ್‌ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿ, ಅದು ಆಡಳಿತವನ್ನು ಮುಖ್ಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಶುರು ಮಾಡುತ್ತಿದ್ದಂತೆ, ಬೆಜೆಪಿ ಬೆಂಬಲಿಗರು ಅಲರ್ಟ್ ಆಗಿದ್ದು, ಸಿಜೆಪಿ ಪಾಕಿಸ್ತಾನ ಮೂಲದ್ದು, ದೇಶದ ಯುವಜನರನ್ನು ಪ್ರಚೋದಿಸಿ ಆಂತರಿಕವಾಗಿ ದಂಗೆಯೆಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಬಿಜೆಪಿ, ಸಂಘಪರಿವಾರವನ್ನು ವಿರೋಧಿಸುವವರು ದೇಶದ್ರೋಹಿಗಳು ಎಂಬ ತಮ್ಮ ಎಂದಿನ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಬೆಂಬಲಿಗರು, ಸಿಜೆಪಿ ಪಾಕಿಸ್ತಾನ ಮೂಲದ್ದು, ಅದನ್ನು ಬೆಂಬಲಿಸುವವರು ದೇಶದ್ರೋಹಿಗಳು ಎಂಬಂತಹ ಒಂದು ಪ್ರಚಾರವನ್ನು ಇಂಟರ್‌ನೆಟ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಕೈಗೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರು ಸಿಜೆಪಿಯ ಫಾಲೋವರ್ಸ್‌ಗಳ ಪೈ ಚಾರ್ಟ್ ಹೊಂದಿರುವ ಗ್ರಾಫಿಕ್ ಅನ್ನು 2026ರ ಮೇ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಪೈಕಿ 49% ಮಂದಿ ಪಾಕಿಸ್ತಾನದವರು, 14% ಅಮೆರಿಕದವರು, 14% ಬಾಂಗ್ಲಾದೇಶದವರು ಮತ್ತು ಕೇವಲ 9% ಮಾತ್ರ ಭಾರತದವರು, ಉಳಿದವರು ಯುನೈಟೆಡ್ ಕಿಂಗ್‌ಡಂ (ಯುಕೆ) ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಇಯವರು ಎಂದು ಹೇಳಿಕೊಂಡಿದ್ದಾರೆ. ಬಗ್ಗಾ ಸಿಜೆಪಿಯನ್ನು ‘ಪಾಕಿಸ್ತಾನ ಜನತಾ ಪಕ್ಷ’ ಎಂದು ತಮ್ಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ರಿಷಿ ಬಾಗ್ರಿ ಕೂಡ 2026ರ ಮೇ 21ರಂದು ಅದೇ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿ “ಜಿರಳೆ ಜನತಾ ಪಕ್ಷದ ಸತ್ಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಮೆರಿಕದ ನಾಗರಿಕರು ಇದರ ಇನ್‌ಸ್ಟಾ ಫಾಲೋವರ್ಸ್‌ಗಳಲ್ಲಿ 77% ರಷ್ಟಿದ್ದಾರೆ. ಭಾರತದವರು ಕೇವಲ 9% ರಷ್ಟನ್ನು ಮಾತ್ರ” ಎಂದು ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್ ಪತ್ರಕರ್ತೆ ಚಿತ್ರಾ ತ್ರಿಪಾಠಿ ಕೂಡ ಫೇಸ್‌ಬುಕ್‌ನಲ್ಲಿ ವೈರಲ್ ಆದ ಹೇಳಿಕೆಯನ್ನು ಪುಷ್ಟೀಕರಿಸಿದ್ದರು. ಬಗ್ಗಾ ಅವರ ಮಾತುಗಳನ್ನು ಉಲ್ಲೇಖಿಸಿ, “ಕಾಕ್ರೋಚ್ ಜನತಾ ಪಕ್ಷದ ಅರ್ಧದಷ್ಟು ಫಾಲೋವರ್ಸ್ ಪಾಕಿಸ್ತಾನಿಗಳು” ಎಂದು ಬರೆದುಕೊಂಡಿದ್ದರು.

ಝೀ-ಮಾಲೀಕತ್ವದ ಸುದ್ದಿ ಸಂಸ್ಥೆ WION ಕೂಡ ಸಿಜೆಪಿಯ ಇನ್‌ಸ್ಟಾಗ್ರಾಮ್ ಪೇಜ್‌ನ “ವಿದೇಶಿ ಅನುಯಾಯಿಗಳ” ಬಗ್ಗೆ ವರದಿಯನ್ನು ಪ್ರಕಟಿಸಿತ್ತು. “ಪಾಕಿಸ್ತಾನ ‘ಜಿರಳೆ ಜನತಾ ಪಕ್ಷ’ದತ್ತ ದೃಷ್ಟಿ ಹಾಯಿಸಿದೆಯೇ? ನೆಟಿಜನ್‌ಗಳು ಹೆಚ್ಚಿನ ಸಂಖ್ಯೆಯ ಪಾಕ್, ಬಾಂಗ್ಲಾದೇಶ ಮತ್ತು ಟರ್ಕಿ ಮೂಲದ ಫಾಲೋವರ್ಸ್‌ಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿತ್ತು.

ಇದೇ ರೀತಿಯ ಪೋಸ್ಟ್‌ಗಳನ್ನು ಹಲವು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಎಂಬ ಕುತೂಹಲದಿಂದ ನಾವು ಈ ಬಗ್ಗೆ ಮಾಹಿತಿಯನ್ನು ಹುಡುಕಿದ್ದೆವು. ಈ ವೇಳೆ ದೇಶದ ಪ್ರಸಿದ್ದ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ altnews.in ಈ ಬಗ್ಗೆ ಸತ್ಯಾಸತ್ಯತೆಯ ವರದಿ ಪ್ರಕಟಿಸಿರುವುದು ಗಮನಿಸಿದ್ದೇವೆ.

altnews.in ತನ್ನ ವರದಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ನಾವು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಸಂಪರ್ಕಿಸಿದ್ದೇವೆ. ಈ ವೇಳೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನ ಫಾಲೋವರ್ಸ್‌ಗಳ ಮಾಹಿತಿಯನ್ನು ಸ್ಕ್ರೀನ್‌ ರೆಕಾರ್ಡ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅದರ ಪ್ರಕಾರ, ಸಿಜೆಪಿ ಇನ್‌ಸ್ಟಾಗ್ರಾಮ್‌ ಪೇಜ್‌ನ ಫಾಲೋವರ್ಸ್‌ಗಳ ಪೈಕಿ ಶೇಕಡ 94.7ರಷ್ಟು ಜನರು ಭಾರತೀಯರು, 1% ಯುಎಸ್‌ದವರು, 0.7% ಯುಕೆ ಮತ್ತು ತಲಾ 0.6% ಜನರು ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನವರು ಎಂದು ಹೇಳಿದೆ.

altnews.in ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋ ಕೆಳಗೆ ನೋಡಬಹುದು

ಗಮನಾರ್ಹವಾಗಿ, ಅಭೀಜಿತ್ ದೀಪ್ಕೆ ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋದಲ್ಲಿ ಸಿಜೆಪಿಯ ಹೆಚ್ಚಿನ ಫಾಲೋವರ್ಸ್‌ಗಳನ್ನು ದೇಶಗಳಾಗಿ ವಿಂಗಡಿಸಿ ನೋಡಿದಾಗ ಅದರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ಕಾಣಿಸುವುದಿಲ್ಲ. ವೈರಲ್ ಹೇಳಿಕೆಗಳನ್ನು ನಿರಾಕರಿಸಲು ದೀಪ್ಕೆ ಸ್ವತಃ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಮೇ 21 ರಂದು ಸಂಜೆ 5:17ಕ್ಕೆ ಅವರು ಅಪ್ಲೋಡ್ ಮಾಡಿದ ಸ್ಕ್ರೀನ್‌ಶಾಟ್‌ನಲ್ಲಿ, ಇದೇ ರೀತಿಯ ಅಂಕಿ ಅಂಶಗಳನ್ನು ಕಾಣಬಹುದು.

ಮೇ 23ರಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸುವ ವೇಳೆಯೂ ಅಭೀಜಿತ್ ಮೇಲಿನ ಸ್ಕ್ರೀನ್ ರೆಕಾರ್ಡ್ ಹಂಚಿಕೊಂಡಿದ್ದರು. “ನಮ್ಮ ಖಾತೆ ಹ್ಯಾಕ್ ಆಗುವ ಮೊದಲು ನಾವು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಮ್ಮ ಪ್ರೇಕ್ಷಕರ ಜನಸಂಖ್ಯಾಶಾಸ್ತ್ರದ ಸ್ಕ್ರೀನ್ ರೆಕಾರ್ಡಿಂಗ್ ಇದು. ಶೇ. 94ಕ್ಕಿಂತ ಹೆಚ್ಚು ಪ್ರೇಕ್ಷಕರು ಭಾರತದವರು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಯುವಕರನ್ನು ಪಾಕಿಸ್ತಾನಿ ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದರು.

ಕಿರಣ್ ರಿಜಿಜು ಅವರು, “ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಯಾಯಿಗಳನ್ನು ಹುಡುಕುತ್ತಿರುವವರ ಬಗ್ಗೆ ನನಗೆ ವಿಷಾದವಿದೆ” ಎಂದು ಯಾರನ್ನೂ ಉಲ್ಲೇಖಿಸದೆ ಮೇ 23ರಂದು ಪೋಸ್ಟ್ ಹಾಕಿದ್ದರು.

ಒಟ್ಟಿನಲ್ಲಿ, ಸಿಜೆಪಿಯ ಫಾಲೋವರ್ಸ್‌ಗಳಲ್ಲಿ ಹೆಚ್ಚಿನವರು ಪಾಕಿಸ್ತಾನಿಗಳು ಎಂಬ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರ ಹೇಳಿಕೆಯನ್ನು ಇತರ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ, ಅದು ಸುಳ್ಳು. ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳಲ್ಲಿ ಶೇಕಡ 90ರಷ್ಟು ಮಂದಿ ಭಾರತೀಯರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...