Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...