Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...