Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...