Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...