Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...