Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...