Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

- Advertisement -
- Advertisement -

ಶನಿವಾರ ಬಿಜೆಪಿಯ ವಕ್ತಾರ ಸಂಬೀತ್ ಪಾತ್ರಾ ಟ್ವೀಟ್ ಒಂದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ 18 ಸೆಕೆಂಡುಗಳ ವಿಡಿಯೋ ಒಂದನ್ನು ಪೋಸ್ಟ್ ಮಾಡಿ, ‘ಸರ್ ಅವರು ಕೃಷಿ ಕಾಯ್ದೆಯ ಅನುಕೂಲಗಳನ್ನು ತಿಳಿಸಿದ್ದಾರೆ ನೋಡಿ’ ಎಂದು ಶೀರ್ಷಿಕೆ ನೀಡಿದ್ದಾರೆ.

ಆ ವಿಡಿಯೋದಲ್ಲಿ ಕೇಜ್ರಿವಾಲ್, ‘ನಿಮ್ಮ ಭೂಮಿ, ಎಂಎಸ್ಪಿ ಮತ್ತು ಮಂಡಿಗಳಿಗೆ ಯಾವುದೇ ಧಕ್ಕೆ ಇಲ್ಲ. ರೈತರು ಈಗ ತಮ್ಮ ಬೆಳೆಗಳನ್ನು ದೇಶದ ಎಲ್ಲಿಯಾದರೂ ಮಾರಬಹುದು. ಇದರಿಂದ ರೈತ ಒಳ್ಳೆಯ ದರ ಪಡೆಯುತ್ತಾನೆ, ಮಂಡಿಯ ಹೊರಗೆ ಎಲ್ಲಿಯದರೂ ಮಾರಬಹುದು. ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ.

ಪಾತ್ರಾ ಟ್ವೀಟ್‌ಗೆ ಸಾವಿರಾರು ಲೈಕ್‌ಗಳು, ರಿಟ್ವೀಟ್‌ಗಳು ದೊರೆತಿವೆ. ಬಿಜೆಪಿ ಕಾರ್ಯಕರ್ತ ವಿಕಾಸ್ ಪ್ರೀತಂ ಸಿನ್ಹಾ ಇದೇ ವಿಡಿಯೋ ಟ್ವೀಟ್ ಮಾಡಿ, ‘ಸುಳ್ಳು, ಮೋಸ, ವಂಚನೆಗಳಿಗೆ ಮುಖ ಅಂತಾ ಇದ್ದರೆ ಅದು ಇದೆ’ ಎಂದು ಬರೆದಿದ್ದಾನೆ. ಇದನ್ನು ಡಿಡಿ ನ್ಯೂಸ್‌ನ ಅಶೋಕ್ ಶ್ರೀವಾತ್ಸವ್ ರಿಟ್ವೀಟ್ ಮಾಡಿದ್ದಾರೆ. ಇನ್ನು ಕೆಲ ಬಿಜೆಪಿಗರು ಕೇಜ್ರಿವಾಲ್ ಸತ್ಯ ಹೇಳಿದ್ದಾರೆ ಎಂದು, ಮತ್ತೆ ಕೆಲವರು ಕೇಜ್ರಿವಾಲ್ ವಂಚಕ ಎಂದು ಟ್ವೀಟ್ ಮಾಡಿದ್ದಾರೆ.

ಫ್ಯಾಕ್ಟ್ ಚೆಕ್: ಅದು ತಿರುಚಿದ ವಿಡಿಯೋ

ಸಂಬೀತ್ ಪಾತ್ರಾ ಕೇಜ್ರಿವಾಲ್‌ರವರ ತಿರುಚಿದ ವಿಡಿಯೋ ಟ್ವೀಟ್ ಮಾಡಿದ್ದಾರೆ. ಮೂಲ ಕ್ಲಿಪ್‌ನಲ್ಲಿ ಕೇಜ್ರಿವಾಲ್ ಕೃಷಿ ಕಾಯ್ದೆ ವಿರುದ್ಧ ಮಾತನಾಡಿದ್ದಾರೆ, ಇದನ್ನು ಅನೇಕ ಸಾಮಾಜಿಕ ಜಾಲತಾಣಿಗರು ಗುರುತಿಸಿದ್ದಾರೆ.

ಜನವರಿ 15ರಂದು ಝೀ ಹರಿಯಾಣ ಹಿಮಾಚಲಪ್ರದೇಶ ಈ ವಿಡಿಯೋವನ್ನು ಸಂಪೂರ್ಣ ಅಪ್‌ಲೋಡ್ ಮಾಡಿತ್ತು. ಅದರ ಸಂಪಾದಕ ದಿಲೀಪ್ ತಿವಾರಿ ಮತ್ತು ಜಗದೀಪ್ ಸಂಧು ಕೇಂಜ್ರಿವಾಲ್‌ರನ್ನು ಸಂದರ್ಶಿಸಿದ ವಿಡಿಯೋ ಅದು.

ಸಂದರ್ಶನದಲ್ಲಿ ಸಂಧು ಪ್ರಶ್ನೆ: (ವಿಡಿಯೊದಲ್ಲಿ 5,55 ಸೆಕೆಂಡ್‌ನಲ್ಲಿ) ಕೇಂದ್ರ ಈ ಕಾಯ್ದೆಯಿಂದ ರೈತರ ಆದಾಯ ದ್ವಿಗುಣ ಆಗುತ್ತದೆ ಎಂದು ಹೇಳುತ್ತಿದೆಯಲ್ಲ?

ಇದಕ್ಕೆ ಉತ್ತರಿಸುವಾಗ ಅರವಿಂದ್ ಕೇಜ್ರಿವಾಲ್, ಬಿಜೆಪಿ ನಾಯಕರು ಹೇಳುತ್ತಾರೆ: ಮಸೂದೆ ನಿಮ್ಮ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು. ಇದೇನೂ ಅನುಕೂಲವಲ್ಲ, ಭೂಮಿ ಅವರದೇ ಎನ್ನುತ್ತಾರೆ. ಎಂಎಸ್‌ಪಿ ತೆಗೆದುಹಾಕುವುದಿಲ್ಲ ಎನ್ನುತ್ತಾರೆ. ಇಲ್ಲಿ ಬೋಲ್ಡ್ ಮಾಡಿ ಇಟಾಲಿಯನ್‌ನಲ್ಲಿರುವ ವಾಕ್ಯಗಳನ್ನು ಮಾತ್ರ ತಿರುಚಿದ ವಿಡಿಯೋದಲ್ಲಿ ಬಳಸಲಾಗಿದೆ.

ಹೀಗೆ ‘ಕೇಜ್ರಿವಾಲ್ ಬಿಜೆಪಿ ನಾಯಕರು ಹೀಗೆ ಹೇಳುತ್ತಾರೆ’ ಎಂದಿದ್ದನ್ನು ಮಾತ್ರ ಎತ್ತಿಕೊಳ್ಳಲಾಗಿದೆ. ಆದರೆ ಬಿಜೆಪಿ ನಾಯಕರು ಹೇಳಿದ್ದೆಲ್ಲ ಸತ್ಯವಲ್ಲ ಎಂದು ಕೇಜ್ರಿವಾಲ್ ಹೇಳುವ ಮುಂದಿನ ಸಾಲುಗಳನ್ನು ಕೈ ಬಿಡಲಾಗಿದೆ.

ಕೊನೆಯಲ್ಲಿ, ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ, ಮಿ. ದಿಲೀಪ್, ದೇಶದ 70 ವರ್ಷದ ಇತಿಹಾಸದಲ್ಲಿ ಕೃಷಿಯಲ್ಲಿ ಇದು ದೊಡ್ಡ ಕ್ರಾಂತಿಕಾರಕ ಹೆಜ್ಜೆ’ ಎಂದು ಹೇಳುತ್ತಾರೆ. ಈ ಮಾತಿನ ಮೊದಲಿಗೆ ಹೇಳುವ ‘ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್‌ಪಿ ನಿರ್ಧರಿಸಿದರೆ’ ಎಂಬುದನ್ನು ತೆಗೆದು ಹಾಕಲಾಗಿದೆ.

ಹೀಗೆ ಒಂದು ಸುದೀರ್ಘ ವಿಡಿಯೋವನ್ನು ಎಡಿಟ್ ಮಾಡಿ, ಅರವಿಂದ್ ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರು ಎಂದು ಬಿಜೆಪಿಯ ಸಂಬಿತ್ ಪಾತ್ರಾ ಟ್ವೀಟ್ ಮಾಡಿದ್ದಾರೆ.

ನಿನ್ನೆ ಭಾನುವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಂಬೀತ್ ಪಾತ್ರಾ ಮತ್ತು ಬಿಜೆಪಿಯವರ ತಿರುಚಿದ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ರೈತ ಹೋರಾಟ ನೋಡಿ ಬಿಜೆಪಿ ಹತಾಶಗೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದಿದ್ದಾರೆ.

ಬಿಜೆಪಿ ಐಟಿ ಸೆಲ್ ರೆಡಿ ಮಾಡಿಕೊಟ್ಟಿರಬಹುದಾದ ಈ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಪಾತ್ರಾ ಮತ್ತೊಮ್ಮೆ ನಗೆಪಾಟಿಲಿಗೀಡಾಗಿದ್ದಾರೆ. ಇದೇನೂ ಅವರಿಗೆ ಹೊಸದಲ್ಲ ಬಿಡಿ. ಅದಕ್ಕಾಗಿಯೇ ಅವರಿನ್ನೂ ಆ ಟ್ವೀಟ್ ಅನ್ನು ಡಿಲೀಟ್ ಮಾಡಿಲ್ಲ.

ಕೃಪೆ: ಆಲ್ಟ್ ನ್ಯೂಸ್


ಇದನ್ನೂ ಓದಿ; ರೈತರ ಪರ ವರದಿ ಮಾಡಿದ ಪತ್ರಕರ್ತೆಗೆ ಅತ್ಯಾಚಾರ, ಕೊಲೆ ಬೆದರಿಕೆ: ಎಬಿವಿಪಿ ಸದಸ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...