Homeಫ್ಯಾಕ್ಟ್‌ಚೆಕ್Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು 'ಕೋಮು ಗಲಾಟೆಯಲ್ಲ'

Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ಘಟನೆಗೆ ಕೋಮು ಬಣ್ಣ ಬಳಿಯಲು ಯತ್ನಿಸಿ ಪಲಾಯನ ಮಾಡಿದ ಸಂಸದ ಪ್ರತಾಪ್ ಸಿಂಹ

- Advertisement -
- Advertisement -

ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ನಡೆದ ವಾಗ್ವಾದದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವೈರಲ್ ವಿಡಿಯೋವನ್ನು ಮಾರ್ಚ್ 24ರಂದು ರಾತ್ರಿ 10 ಗಂಟೆ 46 ನಿಮಿಷಕ್ಕೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಈ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರ ಗಮನಕ್ಕೆ ತರುತ್ತಿದ್ದೇವೆ. ಹಿಂದೂಗಳೇ ಎದ್ದೇಳಿ” ಎಂದು ಬರೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಅವರು ತಮ್ಮ ಪೋಸ್ಟ್‌ನಲ್ಲಿ ಕುಮಾರಸ್ವಾಮಿ ಬಡಾವಣೆಯಲ್ಲಿ ಘಟನೆ ನಡೆದಿದೆ ಎಂದು ಉಲ್ಲೇಖಿಸಿ, ಕೊನೆಯಲ್ಲಿ ‘ಎದ್ದೇಳಿ ಹಿಂದೂಗಳೇ’ ಎಂದು ಬರೆಯುವ ಮೂಲಕ ಘಟನೆಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ. ಆದರೆ, ವಿಡಿಯೋದಲ್ಲಿರುವ ಘಟನೆ ಏನು? ಹೇಗೆ ನಡೆಯಿತು? ಇತ್ಯಾದಿ ಯಾವ ಮಾಹಿತಿಯನ್ನೂ ಅವರು ಉಲ್ಲೇಖಿಸಿರಲಿಲ್ಲ. ಪ್ರಸ್ತುತ ಪ್ರತಾಪ್ ಸಿಂಹ ಅವರು ತಮ್ಮ ಎಕ್ಸ್‌ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್ ಡಿಲಿಟ್ ಮಾಡಿರುವುದು

ಫ್ಯಾಕ್ಟ್‌ಚೆಕ್ : ಪ್ರತಾಪ್ ಸಿಂಹ ಹಂಚಿಕೊಂಡ ವಿಡಿಯೋಗೆ ಸಂಬಂಧಪಟ್ಟಂತೆ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇಂದು (25 ಮಾರ್ಚ್ 2024) ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ‘Neighbours fight over parking; police say ‘no communal angle”ಎಂಬ ಶೀರ್ಷಿಕೆಯಲ್ಲಿ ವಿಡಿಯೋಗೆ ಸಂಬಂಧಪಟ್ಟಂತೆ ಸುದ್ದಿ ಪ್ರಕಟಿಸಿದೆ. ಸುದ್ದಿಯ ಶೀರ್ಷಿಕೆಯಲ್ಲೇ ಪಾರ್ಕಿಂಗ್ ವಿಚಾರಕ್ಕೆ ನೆರೆಹೊರೆಯವರ ನಡುವೆ ಜಗಳ ನಡೆದಿದೆ. ಇದರಲ್ಲಿ ಕೋಮು ವಿಷಯವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಸುದ್ದಿಯನ್ನು ವಿವರವಾಗಿ ನೋಡುವುದಾದರೆ, “ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಪ್ರಗತಿಪುರದಲ್ಲಿ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನಾ ಸ್ಥಳದಲ್ಲಿ ಜನರು ಗುಂಪಾಗಿ ಜಮಾಯಿಸಿದ್ದರಿಂದ ಕೋಮು ಗಲಾಟೆಯ ವದಂತಿ ಹಬ್ಬಿತ್ತು. ಆದರೆ, ಇದು ಕುಮಾರ್ ಮತ್ತು ಸೈಯ್ಯದ್ ತಲ್ಹಾ ಎಂಬ ಇಬ್ಬರು ನೆರೆಹೊರೆಯವರ ನಡುವೆ ಆಟೋ ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳ. ಇದರಲ್ಲಿ ಯಾವುದೇ ಕೋಮು ವಿಚಾರ ಇಲ್ಲ ಎಂದು ಉಪ ಪೊಲೀಸ್ ಆಯುಕ್ತ ( ಬೆಂಗಳೂರು ದಕ್ಷಿಣ) ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ” ಎಂದು ಹೇಳಲಾಗಿದೆ.

“ಇಬ್ಬರನ್ನು ಹೊರತುಪಡಿಸಿ ಇತರರು ಈ ಗಲಾಟೆಯಲ್ಲಿ ಪಾಲ್ಗೊಂಡಿಲ್ಲ. ವಿಡಿಯೋದಲ್ಲಿ ಒಂದಷ್ಟು ಜನರು ಜಮಾಯಿಸಿರುವುದು ಕಂಡು ಬಂದಿದೆ. ನಮಾಝ್ ಮುಗಿಸಿ ಹೋಗುವಾಗ ಗಲಾಟೆ ನಡೆಯುತ್ತಿದ್ದರಿಂದ ಕೆಲವರು ನಿಂತು ನೋಡಿದ್ದಾರೆ ಅಷ್ಟೆ” ಎಂದು ಉಪ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಇಂಡಿಯಾ ಟುಡೇ, ಟೈಮ್ಸ್ ನೌ ವೆಬ್‌ಸೈಟ್‌ಗಳೂ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳವೇ ಹೊರತು ಯಾವುದೇ ಕೋಮು ಗಲಾಟೆ ಅಲ್ಲ ಎಂದು ತಿಳಿಸಿದೆ.

ಎರಡೂ ಸುದ್ದಿ ಲಿಂಕ್‌ಗಳು ಕೆಳಗಿವೆ
ಇಂಡಿಯಾ ಟುಡೇ
ಟೈಮ್ಸ್‌ ನೌ

ನಾವು ನಡೆಸಿದ ಪರಿಶೀಲನೆಯಲ್ಲಿ ಇದು ಪಾರ್ಕಿಂಗ್ ವಿಚಾರಕ್ಕೆ ನಡೆದ ವಾಗ್ವಾದವೇ ಹೊರತು, ಕೋಮು ಗಲಾಟೆಯಲ್ಲ ಎಂಬುವುದು ಸ್ಪಷ್ಟವಾಗಿದೆ. ಸಂಸದ ಪ್ರತಾಪ್ ಸಿಂಹ ಪ್ರಕರಣಕ್ಕೆ ಕೋಮು ಬಣ್ಣ ಬಳಿಯಲು ಯತ್ನಿಸಿ ಬಳಿಕ ಪೋಸ್ಟ್ ಡಿಲಿಟ್ ಮಾಡುವ ಮೂಲಕ ಪಲಾಯನ ಮಾಡಿರುವುದು ಬಯಲಾಗಿದೆ.

ಇದನ್ನೂ ಓದಿ : Fact Check: ಚುನಾವಣೆ ಹಿನ್ನೆಲೆ ವಾಟ್ಸಾಪ್‌, ಫೇಸ್‌ಬುಕ್ ಮೆಸೇಜ್‌ಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...