Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

- Advertisement -
- Advertisement -

ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರನ್ನು ಪ್ರೇಮಿಗಳ ದಿನವಾದ ಫೆಬ್ರವರಿ 14, 1931 ರಂದು ಗಲ್ಲಿಗೇರಿಸಲಾಯಿತು ಎನ್ನುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿ ವರ್ಷ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಪ್ರೇಮಿಗಳ ದಿನಾಚರಣೆಯನ್ನು ಕೆಲ ಹಿಂದೂ ಮತಾಂಧ ಸಂಘಟನೆಗಳು ವಿರೋಧಿಸುತ್ತವೆ. ಹಾಗಾಗಿ ಫೆಬ್ರವರಿ 14ರ ಪ್ರೇಮಿಗಳ ದಿನದಂದೇ ಭಗತ್ ಸಿಂಗ್ ಮತ್ತು ಆತನ ಸಂಗಾತಿಗಳು ದೇಶಕ್ಕಾಗಿ ಹುತಾತ್ಮರಾಗಿದ್ದಾರೆ, ಅವರನ್ನು ಸ್ಮರಿಸುವುದು ಬಿಟ್ಟು ಪ್ರೇಮಿಗಳ ದಿನಾಚರಣೆ ಸಲ್ಲ ಎಂದು ತಪ್ಪು ಹರಡಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ತ್ಯಾಗದ ನೆನಪಿಗಾಗಿ ಪ್ರತಿ ವರ್ಷ ಮಾರ್ಚ್ 23 ಅನ್ನು ‘ಶಹೀದ್ ದಿವಸ್/ಹುತಾತ್ಮರ ದಿನ’ ಎಂದು ಆಚರಿಸಲಾಗುತ್ತದೆ. ಹುತಾತ್ಮರ ದಿನದಂದು ಪ್ರಸಾರವಾಗಿರುವ ‘ಡಿಡಿ ನ್ಯೂಸ್’ ವಿಡಿಯೋವನ್ನು ಇಲ್ಲಿ ವೀಕ್ಷಿಸಬಹುದು.

ಅವರ ಮರಣದಂಡನೆಗೆ ಸಂಬಂಧಿಸಿದಂತೆ ಮಾರ್ಚ್ 25, 1931 ರಂದು ‘ದಿ ಟ್ರಿಬ್ಯೂನ್’ ಪ್ರಕಟಿಸಿದ ಲೇಖನವನ್ನು ‘ಪ್ರಸಾರ್ ಭಾರತಿ’ ಟ್ವೀಟ್‌ ಅನ್ನು ಇಲ್ಲಿ ನೋಡಬಹುದು. 24 ಮಾರ್ಚ್ 1931 ರಂದು ಪ್ರಕಟವಾದ ‘ದಿ ಹಿಂದೂ’ ಪತ್ರಿಕೆಯ ಲೇಖನವನ್ನು ಇಲ್ಲಿ ಓದಬಹುದು.

ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ ಪೋರ್ಟಲ್‌ನಿಂದ, ಫ್ಯಾಕ್ಟ್ಲಿ ಸಂಸ್ಥೆಯು 1931 ರ ಮಾರ್ಚ್ ತಿಂಗಳಿನಲ್ಲಿ ಭಾರತದ ಆಂತರಿಕ ರಾಜಕೀಯ ಪರಿಸ್ಥಿತಿಯ ಹದಿನೈದು ವರದಿಗಳನ್ನು ಕಂಡುಕೊಂಡಿತು. ಈ ವರದಿಗಳನ್ನು ಬ್ರಿಟಿಷ್ ಸರ್ಕಾರಕ್ಕೆ ಮಾಸಿಕ ಆಧಾರದ ಮೇಲೆ ಕಳುಹಿಸಲಾಗಿದೆ. ಸುಖದೇವ್ ಮತ್ತು ರಾಜ್‌ಗುರು ಅವರೊಂದಿಗೆ ಭಗತ್ ಸಿಂಗ್ ಅವರ ಮರಣದಂಡನೆ ಮಾರ್ಚ್ 23, 1931 ರ ಸಂಜೆ ನಡೆದಿದೆ ಎಂದು ಈ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರನ್ನು ಮಾರ್ಚ್ 23, 1931 ರಂದು ಗಲ್ಲಿಗೇರಿಸಲಾಗಿತ್ತು. ಆದರೆ ಪ್ರೇಮಿಗಳ ದಿನದಂದು ಅಲ್ಲ ಎಂಬುದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....