Homeಚಳವಳಿಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

- Advertisement -
- Advertisement -

ಶುಕ್ರವಾರ ದೆಹಲಿಯ ಸಿಂಘು ಗಡಿಯ ಒಂದು ಭಾಗದಲ್ಲಿ ರೈತರ ಮೇಲೆ ದಾಳಿ ನಡೆಸಿದವರ ಬಗ್ಗೆ ಅಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು, ದಾಂಧಲೆ ನೇತೃತ್ವ ವಹಿಸಿದ ಇಬ್ಬರು ಪಕ್ಕಾ ಬಿಜೆಪಿ ಕಾರ್ಯಕರ್ತರು ಎಂದು ಸಾಬೀತಾಗಿದೆ. ಅದರಲ್ಲಿ ಒಬ್ಬಾತನಂತೂ ಅಮಿತ್ ಶಾ ಜೊತೆ ಪಕ್ಷದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವ ಫೋಟೋಗಳು ವೈರಲಾಗಿದೆ.

ಸಿಂಘು ಗಡಿಯ ಪ್ರತಿಭಟನಾಕಾರರ ಮೇಲೆ ದಾಳಿ ಕುರಿತ ವರದಿಗಳಲ್ಲಿ ಬಹುತೇಕ ಮಾಧ್ಯಮಗಳು , ಸ್ಥಳೀಯರು ಎಂದೋ, ’ಸ್ಥಳೀಯರು ಎಂದು ಕರೆದುಕೊಂಡವರು’ ಎಂದೋ ಹೇಳಿವೆ. ಆದರೆ, ಅಲ್ಟ್‌ನ್ಯೂಸ್ ಹಲವಾರು ವಿಡಿಯೋ, ಫೇಸ್‌ಬುಕ್ ಪ್ರೊಫೈಲ್, ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಗಿರುವ ಫೋಟೋ ಇತ್ಯಾದಿ ಆಧಾರದಲ್ಲಿ, “ದಾಳಿಯ ನೇತೃತ್ವ ವಹಿಸಿದ್ದು ಇಬ್ಬರು ಪ್ರಮುಖ ಬಿಜೆಪಿ ಕಾರ್ಯಕರ್ತರು” ಎಂದು ಸಾಬೀತು ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

 

ಆಜ್‌ತಕ್ ವರದಿಯಲ್ಲಿ, ಸ್ಥಳೀಯರು ಎಂದು ಕರೆದುಕೊಂಡ ಗುಂಪಿನ ಸದಸ್ಯರು, “ಈ ಮೊದಲು ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೆವು, ಜನವರಿ 26 ರ ಘಟನೆ ನಂತರ ನಾವು ಪ್ರತಿಭಟನೆ ವಿರೋಧಿಸುತ್ತಿದ್ದೇವೆ” ಎಂದಿದ್ದರು. ಆಜ್‌ತಕ್ ಪ್ರಸಾರ ಮಾಡಿದ ವಿಡಿಯೋದಲ್ಲಿ, ನೀಲಿ-ಬಿಳಿ-ಹಸಿರು ಪಟ್ಟಿಗಳ ಶರ್ಟ್ ತೊಟ್ಟು ತ್ರಿವರ್ಣ ಧ್ವಜ ಹಿಡಿದು, ಪೊಲೀಸರ ಎದುರು ಕಾಣಿಸುವ ವ್ಯಕ್ತಿ ಅಬನ್ ದಾಬಸ್ ಎಂದು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಗುರುತಿಸಿದ್ದಾರೆ.

ಅಬನ್ ದಾಬಸ್ ಯಾರು?

“ವಾಯುವ್ಯ ದೆಹಲಿಯ ಸಾಮಾಜಿಕ ಕಾರ್ಯಕರ್ತ” ಎಂದು ಈತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಹೇಳಿಕೊಂಡಿದ್ದಾನೆ. ’ಅಬನ್ ಕುಮಾರ್ ಸೊಷಿಯಲ್ ವರ್ಕರ್’ ಎಂಬುದು ಈತನ ಫೇಸ್‌ಬುಕ್ ಪೇಜ್. ದಾಬಸ್ ಎಂಬುದು ಜಾಟ್ ಸಮುದಾಯದ ವಂಶಾವಳಿಯ ಹೆಸರು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಬರ್‍ವಾಲಾ ಗ್ರಾಮದ 31 ನೆ ವಾರ್ಡ್ ಪೂರ್ತ್ ಕುರ್‍ದ್‌ನಲ್ಲಿ ಮನೆಮನೆಗೆ ತೆರಳಿ ಸ್ಯಾನಿಟೈಜೇಶನ್ ಮಾಡುವ ಕಾರ್ಯಕ್ರಮದ ಫೋಟೊವನ್ನು ಕಳೆದ ವರ್ಷ ತನ್ನ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ಅಮನ್ ಸ್ಥಳೀಯ (ಬರ್‍ವಾಲಾ) ಬಿಜೆಪಿ ನಾಯಕಿ ಮತ್ತು ವಾರ್ಡ್ 31 ರ ಕೌನ್ಸಿಲರ್ ಅಂಜು ಕುಮಾರ್ ಅಲಿಯಾಸ್ ಅಂಜು ದೇವಿಯ ಪತಿ.

ವಾಯುವ್ಯ ದೆಹಲಿಯ ಬಿಜೆಪಿಯ ಅಧಿಕೃತ ಕಾರ್ಯಕ್ರಮಗಳಲ್ಲೂ ಈತ ಕಾಣಿಸಿಕೊಂಡಿದ್ದಾನೆ. ಮೊದಲಿಗೆ ಅಮನ್, ಅಂಜು ಸ್ಥಳೀಯ ಆಪ್ ನಾಯಕರಾಗಿದ್ದು, 2017 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಅಮನ್ ಗೃಹ ಸಚಿವ ಅಮಿತ್ ಶಾ ಜೊತೆಗಿರುವ ಪಕ್ಷದ ಅಧಿಕೃತ ಕಾರ್ಯಕ್ರಮದ ಫೋಟೊ ಅಪ್‌ಲೋಡ್ ಮಾಡಿದ್ದಾನೆ.

ಅಮನ್ ಪತ್ನಿ ಅಂಜು ಕುಮಾರ್ ಪೂರ್ತ್ ಖುರ್‍ದ್ ನಿವಾಸಿ. ಪೂರ್ತ್ ಖುರ್‍ದ್ ಸಿಂಘು ಗಡಿಯಿಂದ 15 ಕಿಮೀ ದೂರದಲ್ಲಿದೆ. ಸ್ಥಳೀಯರು ಎಂದು ಹೇಳಿಕೊಂಡ ದಾಂಧಲೆಕೋರರು, ಪ್ರತಿಭಟನೆಯಿಂದ ವಾಹನ ದಟ್ಟಣೆ ಹೆಚ್ಚಾಗಿ ತಾವು ಅಂಗಡಿ-ಮುಗ್ಗಟ್ಟು ತೆಗೆಯಲಾಗುತ್ತಿಲ್ಲ ಎಂದಿದ್ದರು. ಆದರೆ 15 ಕಿಮೀ ದೂರದ ಒಂದು ಗ್ರಾಮವನ್ನು ನೆರೆಹೊರೆಯ ಪ್ರದೇಶ ಎನ್ನಲಾಗುವುದಿಲ್ಲ ಎಂಬುವುದು ಸಾಮಾನ್ಯ ಜ್ಞಾನವಾಗಿದೆ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಇನ್ನೊಬ್ಬ ಪ್ರಮುಖ ಬಿಜೆಪಿ ಕಾರ್ಯಕರ್ತ

ಕಿಶನ್ ದಾಬಸ್ ಎನ್ನುವಾತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಸಿಂಘು ಗಡಿಯಲ್ಲಿನ ಹಿಂಸಾಚಾರದ ಫೋಟೊವನ್ನು ಅಪ್‌ಲೋಡ್ ಮಾಡಿದ್ದ. ಒಂದೆರಡು ಗಂಟೆಗಳಲ್ಲಿ ಆತ ಪೋಸ್ಟ್ ಅನ್ನು ಡಿಲಿಟ್ ಮಾಡುವ ಮುನ್ನ ಅಲ್ಟ್‌ನ್ಯೂಸ್ ಅದರ ಸ್ಕ್ರೀನ್‌ಶಾಟ್ ಪಡೆದುಕೊಂಡಿತ್ತು. ಅದರಲ್ಲಿ ಬಿಜೆಪಿ ನಾಯಕರಾದ ಸಂದೀಪ್ ಶೆರಾವತ್ ಮತ್ತು ರವೀಂದರ್‌ಕುಮಾರ್ ಅವರನ್ನು ಟ್ಯಾಗ್ ಮಾಡಲಾಗಿತ್ತು. ಇವರಿಬ್ಬರೂ ಕಿಶನ್‌ಗೆ ತುಂಬ ಪರಿಚಯ ಎಂದೆನಿಸುತ್ತದೆ.

 

ಕಿಶನ್ ಅಪ್‌ಲೋಡ್ ಮಾಡಿರುವ ದಾಂಧಲೆಯ ವಿಡೀಯೋಗಳಲ್ಲಿ ಒಂದರಲ್ಲಿ ಅಮನ್ ಮತ್ತು ಕಿಶನ್ ಇಬ್ಬರೂ ಜೊತೆಗಿದ್ದರೆ, ಪಕ್ಕದಲ್ಲೆ ದೊಡ್ಡ ಸಂಖ್ಯೆಯಲ್ಲಿ ಪೊಲೀಸರಿದ್ದಾರೆ. ಇನ್ನೊಂದರಲ್ಲಿ, ಪೊಲೀಸ್ ಎದುರು ನಿಂತಿರುವ ದಾಂಧಲೆಕೋರರ ಗುಂಪಿನಲ್ಲಿ ಅಮನ್ ಮುಂದಿನ ಸಾಲಿನಲ್ಲಿದ್ದಾನೆ. ಆಜ್‌ತಕ್ ವಿಡಿಯೋದಲ್ಲೂ ಇದನ್ನು ನೊಡಬಹುದು. ಈ ವಿಡಿಯೋದಲ್ಲೂ ಇಬ್ಬರೂ ಜೊತೆಯಲ್ಲಿ ಇರುವುದನ್ನು ನೋಡಬಹುದು. ಕಳೆದ ವರ್ಷ ಕಿಶನ್ ಮಾಡಿದ ಪೋಸ್ಟ್‌ನಲ್ಲಿ ವಾರ್ಡ್ 31 ರ ಕೌನ್ಸಿಲರ್ (ಇನ್ನೊಬ್ಬ ದಾಂಧಲೆಕೋರ ಅಮನ್ ಪತ್ನಿ) ಜೊತೆ ಕಿಶನ್ ಇದ್ದಾನೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಎಲ್ಲಕ್ಕಿಂತ ಮುಖ್ಯವಾಗಿ, ಇತ್ತೀಚಿನ ಫೋಟೊವೊಂದರಲ್ಲಿ ಅಮನ್ ಮತ್ತು ಕಿಶನ್ ಬಿಜೆಪಿ ದೆಹಲಿ ಘಟಕದ ಬ್ಯಾನರ್‌ನಡಿ ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವುದನ್ನು ನೊಡಬಹುದಾಗಿದೆ.

ಮಾಧ್ಯಮಗಳು ಹೇಳುತ್ತಿರುವಂತೆ ಸಿಂಘು ಗಡಿಯಲ್ಲಿ ದಾಂಧಲೆ ಆಗಿದೆಯೆ?

ಸಿಂಘು ಗಡಿಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ರೈತರನ್ನು ತೆರವುಗೊಳಿಸುವಂತೆ ಪ್ರತಿಭಟನೆ ಮಾಡಿದ್ದಾರೆ ಎಂಬುದು ಅರ್ಧ ಸತ್ಯ. ಮೊದಲಿಗೆ ಅವರು ಸ್ಥಳೀಯರಲ್ಲ ಬದಲಿಗೆ ಬಿಜೆಪಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಎಂದು ಆಲ್ಟ್‌ನ್ಯೂಸ್ ನಡೆಸಿರುವ ಫ್ಯಾಕ್ಟ್‌ಚೆಕ್ ಮೇಲಿನ ವರದಿಯ ಮೂಲಕ ತಿಳಿಯಬಹುದು. ಎರಡನೇದಾಗಿ ಅವರು ಸಿಂಘು ಗಡಿಯ ಒಂದು ಮೂಲೆಯಲ್ಲಿ ಚಿಕ್ಕ ಪ್ರತಿಭಟನೆಯ ಪ್ರಹಸನವಷ್ಟೇ ನಡೆಸಿದ್ದಾರೆ. ANI ಸೇರಿದಂತೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನೆ ದೊಡ್ಡದು ಮಾಡಿ ತೋರಿಸಿ ಇಡೀ ಸಿಂಘು ಗಡಿಗೆ ಸ್ಥಳೀಯರು ನುಗ್ಗಿಬಂದಿದ್ದಾರೆ ಎಂದು ಸುಳ್ಳು ವರದಿ ಮಾಡಿವೆ.

ವಾಸ್ತವವೆಂದರೆ ಸಿಂಘು ಗಡಿಯಲ್ಲಿ ಎರಡು ಪ್ರತಿಭಟನೆಗಳು ನಡೆಯುತ್ತಿವೆ. ಹರಿಯಾಣಕ್ಕೆ ಹೊಂದಿಕೊಂಡಂತೆ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ನಡೆಯುತ್ತಿರುವುದು ಒಂದು ಬೃಹತ್ ಪ್ರತಿಭಟನೆಯಾದರೆ, ಅಲ್ಲಿಂದ 200 ಮೀಟರ್ ದೂರದಲ್ಲಿ ಅಂದರೆ ದೆಹಲಿ ವ್ಯಾಪ್ತಿಗೆ ಬರುವ ಸ್ಥಳದಲ್ಲಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ನೇತೃತ್ವದಲ್ಲಿ ಸಣ್ಣ ಪ್ರತಿಭಟನೆ ನಡೆಯುತ್ತಿದೆ. (ದೀಪ್ ಸಿಧು ಇದೇ ಸಂಘಟನೆಗೆ ಸೇರಿದ್ದು, ಮುಖ್ಯವಾಗಿ ಗಣರಾಜ್ಯೋತ್ಸವದ ದಿನ ನಿಯೋಜಿತ ಮಾರ್ಗ ಉಲ್ಲಂಘಿಸಿ, ಕೆಂಪು ಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿದ್ದು ಇವರೆ ಎನ್ನಲಾಗಿದೆ)

ಈ ಭಾಗ ದೆಹಲಿ ಪೊಲೀಸರ ವ್ಯಾಪ್ತಿಗೆ ಬರುವುದರಿಂದ, ಜನವರಿ 27 ರಂದು ಸ್ಥಳೀಯರ ಹೆಸರಿನ ಗುಂಪು ಇಲ್ಲಿ ಪ್ರತಿಭಟನೆ ನಡೆಸಿದೆ. ಇದು ಇನ್ನೊಂದು ಹರಿಯಾಣದ ಬದಿಯಲ್ಲಿರುವ ರೈತ ಗುಂಪಿಗೆ ಗೊತ್ತಾಗಿಯೇ ಇಲ್ಲ. ಆದರೆ ಮಾಧ್ಯಮಗಳು ಇಡೀ ಸಿಂಘು ಗಡಿಯಲ್ಲಿ ಪ್ರತಿಭಟನೆ ಎಂದು ತಪ್ಪು ವರದಿ ಮಾಡಿವೆ. ಏಕೆಂದರೆ ಅಲ್ಲಿ 60 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸುತ್ತಿದ್ದು ಯಾವು ಗುಂಪು ಸಹ ಅಲ್ಲಿಗೆ ನುಗ್ಗಿ ಪ್ರತಿಭಟನೆ ನಡೆಸುವ ಧೈರ್ಯ ತೋರುವುದಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಈ ಪ್ರಾಮಾಣಿಕತೆಯ ವಾರ್ತೆಗಾಗಿ ನಾನು ಕಾಯುತ್ತಿರುತ್ತೇನೆ ಏಕೆಂದರೆ ಇವತ್ತಿನ ಮಾಧ್ಯಮ ಟಿ. ವಿ ಅವರು ಕೇವಲ ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಪ್ರಸಂಗ. ಕೇವಲ ಟಿ. ಆರ್. ಪಿ ಗಾಗಿ ಕೆಲಸ ಮಾಡುವ ಚಾನೆಲ್ ಗಳು ನಮಗೆ ಬೇಕಿಲ್ಲ ನಮಗೆ ನಿಮ್ಮ ಸತ್ಯ ಸತ್ಯತೆ ಇರುವ ಮಾಹಿತಿಗಾಗಿ ನಾವು ದಿನ ನಿತ್ಯ ಕಾಯುತ್ತಿರುತ್ತೇವೆ. ಧನ್ಯವಾದಗಳು ಗೌರಿ. ಲಂಕೇಶ್. ??

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...