Homeಚಳವಳಿಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

- Advertisement -
- Advertisement -

ಶುಕ್ರವಾರ ದೆಹಲಿಯ ಸಿಂಘು ಗಡಿಯ ಒಂದು ಭಾಗದಲ್ಲಿ ರೈತರ ಮೇಲೆ ದಾಳಿ ನಡೆಸಿದವರ ಬಗ್ಗೆ ಅಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ನಡೆಸಿದ್ದು, ದಾಂಧಲೆ ನೇತೃತ್ವ ವಹಿಸಿದ ಇಬ್ಬರು ಪಕ್ಕಾ ಬಿಜೆಪಿ ಕಾರ್ಯಕರ್ತರು ಎಂದು ಸಾಬೀತಾಗಿದೆ. ಅದರಲ್ಲಿ ಒಬ್ಬಾತನಂತೂ ಅಮಿತ್ ಶಾ ಜೊತೆ ಪಕ್ಷದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವ ಫೋಟೋಗಳು ವೈರಲಾಗಿದೆ.

ಸಿಂಘು ಗಡಿಯ ಪ್ರತಿಭಟನಾಕಾರರ ಮೇಲೆ ದಾಳಿ ಕುರಿತ ವರದಿಗಳಲ್ಲಿ ಬಹುತೇಕ ಮಾಧ್ಯಮಗಳು , ಸ್ಥಳೀಯರು ಎಂದೋ, ’ಸ್ಥಳೀಯರು ಎಂದು ಕರೆದುಕೊಂಡವರು’ ಎಂದೋ ಹೇಳಿವೆ. ಆದರೆ, ಅಲ್ಟ್‌ನ್ಯೂಸ್ ಹಲವಾರು ವಿಡಿಯೋ, ಫೇಸ್‌ಬುಕ್ ಪ್ರೊಫೈಲ್, ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಗಿರುವ ಫೋಟೋ ಇತ್ಯಾದಿ ಆಧಾರದಲ್ಲಿ, “ದಾಳಿಯ ನೇತೃತ್ವ ವಹಿಸಿದ್ದು ಇಬ್ಬರು ಪ್ರಮುಖ ಬಿಜೆಪಿ ಕಾರ್ಯಕರ್ತರು” ಎಂದು ಸಾಬೀತು ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳು!

 

ಆಜ್‌ತಕ್ ವರದಿಯಲ್ಲಿ, ಸ್ಥಳೀಯರು ಎಂದು ಕರೆದುಕೊಂಡ ಗುಂಪಿನ ಸದಸ್ಯರು, “ಈ ಮೊದಲು ರೈತ ಪ್ರತಿಭಟನೆಗೆ ಬೆಂಬಲ ನೀಡಿದ್ದೆವು, ಜನವರಿ 26 ರ ಘಟನೆ ನಂತರ ನಾವು ಪ್ರತಿಭಟನೆ ವಿರೋಧಿಸುತ್ತಿದ್ದೇವೆ” ಎಂದಿದ್ದರು. ಆಜ್‌ತಕ್ ಪ್ರಸಾರ ಮಾಡಿದ ವಿಡಿಯೋದಲ್ಲಿ, ನೀಲಿ-ಬಿಳಿ-ಹಸಿರು ಪಟ್ಟಿಗಳ ಶರ್ಟ್ ತೊಟ್ಟು ತ್ರಿವರ್ಣ ಧ್ವಜ ಹಿಡಿದು, ಪೊಲೀಸರ ಎದುರು ಕಾಣಿಸುವ ವ್ಯಕ್ತಿ ಅಬನ್ ದಾಬಸ್ ಎಂದು ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಗುರುತಿಸಿದ್ದಾರೆ.

ಅಬನ್ ದಾಬಸ್ ಯಾರು?

“ವಾಯುವ್ಯ ದೆಹಲಿಯ ಸಾಮಾಜಿಕ ಕಾರ್ಯಕರ್ತ” ಎಂದು ಈತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಹೇಳಿಕೊಂಡಿದ್ದಾನೆ. ’ಅಬನ್ ಕುಮಾರ್ ಸೊಷಿಯಲ್ ವರ್ಕರ್’ ಎಂಬುದು ಈತನ ಫೇಸ್‌ಬುಕ್ ಪೇಜ್. ದಾಬಸ್ ಎಂಬುದು ಜಾಟ್ ಸಮುದಾಯದ ವಂಶಾವಳಿಯ ಹೆಸರು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ಬರ್‍ವಾಲಾ ಗ್ರಾಮದ 31 ನೆ ವಾರ್ಡ್ ಪೂರ್ತ್ ಕುರ್‍ದ್‌ನಲ್ಲಿ ಮನೆಮನೆಗೆ ತೆರಳಿ ಸ್ಯಾನಿಟೈಜೇಶನ್ ಮಾಡುವ ಕಾರ್ಯಕ್ರಮದ ಫೋಟೊವನ್ನು ಕಳೆದ ವರ್ಷ ತನ್ನ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ್ದ. ಅಮನ್ ಸ್ಥಳೀಯ (ಬರ್‍ವಾಲಾ) ಬಿಜೆಪಿ ನಾಯಕಿ ಮತ್ತು ವಾರ್ಡ್ 31 ರ ಕೌನ್ಸಿಲರ್ ಅಂಜು ಕುಮಾರ್ ಅಲಿಯಾಸ್ ಅಂಜು ದೇವಿಯ ಪತಿ.

ವಾಯುವ್ಯ ದೆಹಲಿಯ ಬಿಜೆಪಿಯ ಅಧಿಕೃತ ಕಾರ್ಯಕ್ರಮಗಳಲ್ಲೂ ಈತ ಕಾಣಿಸಿಕೊಂಡಿದ್ದಾನೆ. ಮೊದಲಿಗೆ ಅಮನ್, ಅಂಜು ಸ್ಥಳೀಯ ಆಪ್ ನಾಯಕರಾಗಿದ್ದು, 2017 ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ಅಮನ್ ಗೃಹ ಸಚಿವ ಅಮಿತ್ ಶಾ ಜೊತೆಗಿರುವ ಪಕ್ಷದ ಅಧಿಕೃತ ಕಾರ್ಯಕ್ರಮದ ಫೋಟೊ ಅಪ್‌ಲೋಡ್ ಮಾಡಿದ್ದಾನೆ.

ಅಮನ್ ಪತ್ನಿ ಅಂಜು ಕುಮಾರ್ ಪೂರ್ತ್ ಖುರ್‍ದ್ ನಿವಾಸಿ. ಪೂರ್ತ್ ಖುರ್‍ದ್ ಸಿಂಘು ಗಡಿಯಿಂದ 15 ಕಿಮೀ ದೂರದಲ್ಲಿದೆ. ಸ್ಥಳೀಯರು ಎಂದು ಹೇಳಿಕೊಂಡ ದಾಂಧಲೆಕೋರರು, ಪ್ರತಿಭಟನೆಯಿಂದ ವಾಹನ ದಟ್ಟಣೆ ಹೆಚ್ಚಾಗಿ ತಾವು ಅಂಗಡಿ-ಮುಗ್ಗಟ್ಟು ತೆಗೆಯಲಾಗುತ್ತಿಲ್ಲ ಎಂದಿದ್ದರು. ಆದರೆ 15 ಕಿಮೀ ದೂರದ ಒಂದು ಗ್ರಾಮವನ್ನು ನೆರೆಹೊರೆಯ ಪ್ರದೇಶ ಎನ್ನಲಾಗುವುದಿಲ್ಲ ಎಂಬುವುದು ಸಾಮಾನ್ಯ ಜ್ಞಾನವಾಗಿದೆ!

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಪತ್ರಕರ್ತರೊಬ್ಬರು ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆಯೇ?

ಇನ್ನೊಬ್ಬ ಪ್ರಮುಖ ಬಿಜೆಪಿ ಕಾರ್ಯಕರ್ತ

ಕಿಶನ್ ದಾಬಸ್ ಎನ್ನುವಾತ ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಸಿಂಘು ಗಡಿಯಲ್ಲಿನ ಹಿಂಸಾಚಾರದ ಫೋಟೊವನ್ನು ಅಪ್‌ಲೋಡ್ ಮಾಡಿದ್ದ. ಒಂದೆರಡು ಗಂಟೆಗಳಲ್ಲಿ ಆತ ಪೋಸ್ಟ್ ಅನ್ನು ಡಿಲಿಟ್ ಮಾಡುವ ಮುನ್ನ ಅಲ್ಟ್‌ನ್ಯೂಸ್ ಅದರ ಸ್ಕ್ರೀನ್‌ಶಾಟ್ ಪಡೆದುಕೊಂಡಿತ್ತು. ಅದರಲ್ಲಿ ಬಿಜೆಪಿ ನಾಯಕರಾದ ಸಂದೀಪ್ ಶೆರಾವತ್ ಮತ್ತು ರವೀಂದರ್‌ಕುಮಾರ್ ಅವರನ್ನು ಟ್ಯಾಗ್ ಮಾಡಲಾಗಿತ್ತು. ಇವರಿಬ್ಬರೂ ಕಿಶನ್‌ಗೆ ತುಂಬ ಪರಿಚಯ ಎಂದೆನಿಸುತ್ತದೆ.

 

ಕಿಶನ್ ಅಪ್‌ಲೋಡ್ ಮಾಡಿರುವ ದಾಂಧಲೆಯ ವಿಡೀಯೋಗಳಲ್ಲಿ ಒಂದರಲ್ಲಿ ಅಮನ್ ಮತ್ತು ಕಿಶನ್ ಇಬ್ಬರೂ ಜೊತೆಗಿದ್ದರೆ, ಪಕ್ಕದಲ್ಲೆ ದೊಡ್ಡ ಸಂಖ್ಯೆಯಲ್ಲಿ ಪೊಲೀಸರಿದ್ದಾರೆ. ಇನ್ನೊಂದರಲ್ಲಿ, ಪೊಲೀಸ್ ಎದುರು ನಿಂತಿರುವ ದಾಂಧಲೆಕೋರರ ಗುಂಪಿನಲ್ಲಿ ಅಮನ್ ಮುಂದಿನ ಸಾಲಿನಲ್ಲಿದ್ದಾನೆ. ಆಜ್‌ತಕ್ ವಿಡಿಯೋದಲ್ಲೂ ಇದನ್ನು ನೊಡಬಹುದು. ಈ ವಿಡಿಯೋದಲ್ಲೂ ಇಬ್ಬರೂ ಜೊತೆಯಲ್ಲಿ ಇರುವುದನ್ನು ನೋಡಬಹುದು. ಕಳೆದ ವರ್ಷ ಕಿಶನ್ ಮಾಡಿದ ಪೋಸ್ಟ್‌ನಲ್ಲಿ ವಾರ್ಡ್ 31 ರ ಕೌನ್ಸಿಲರ್ (ಇನ್ನೊಬ್ಬ ದಾಂಧಲೆಕೋರ ಅಮನ್ ಪತ್ನಿ) ಜೊತೆ ಕಿಶನ್ ಇದ್ದಾನೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಎಲ್ಲಕ್ಕಿಂತ ಮುಖ್ಯವಾಗಿ, ಇತ್ತೀಚಿನ ಫೋಟೊವೊಂದರಲ್ಲಿ ಅಮನ್ ಮತ್ತು ಕಿಶನ್ ಬಿಜೆಪಿ ದೆಹಲಿ ಘಟಕದ ಬ್ಯಾನರ್‌ನಡಿ ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವುದನ್ನು ನೊಡಬಹುದಾಗಿದೆ.

ಮಾಧ್ಯಮಗಳು ಹೇಳುತ್ತಿರುವಂತೆ ಸಿಂಘು ಗಡಿಯಲ್ಲಿ ದಾಂಧಲೆ ಆಗಿದೆಯೆ?

ಸಿಂಘು ಗಡಿಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿ ರೈತರನ್ನು ತೆರವುಗೊಳಿಸುವಂತೆ ಪ್ರತಿಭಟನೆ ಮಾಡಿದ್ದಾರೆ ಎಂಬುದು ಅರ್ಧ ಸತ್ಯ. ಮೊದಲಿಗೆ ಅವರು ಸ್ಥಳೀಯರಲ್ಲ ಬದಲಿಗೆ ಬಿಜೆಪಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಎಂದು ಆಲ್ಟ್‌ನ್ಯೂಸ್ ನಡೆಸಿರುವ ಫ್ಯಾಕ್ಟ್‌ಚೆಕ್ ಮೇಲಿನ ವರದಿಯ ಮೂಲಕ ತಿಳಿಯಬಹುದು. ಎರಡನೇದಾಗಿ ಅವರು ಸಿಂಘು ಗಡಿಯ ಒಂದು ಮೂಲೆಯಲ್ಲಿ ಚಿಕ್ಕ ಪ್ರತಿಭಟನೆಯ ಪ್ರಹಸನವಷ್ಟೇ ನಡೆಸಿದ್ದಾರೆ. ANI ಸೇರಿದಂತೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನೆ ದೊಡ್ಡದು ಮಾಡಿ ತೋರಿಸಿ ಇಡೀ ಸಿಂಘು ಗಡಿಗೆ ಸ್ಥಳೀಯರು ನುಗ್ಗಿಬಂದಿದ್ದಾರೆ ಎಂದು ಸುಳ್ಳು ವರದಿ ಮಾಡಿವೆ.

ವಾಸ್ತವವೆಂದರೆ ಸಿಂಘು ಗಡಿಯಲ್ಲಿ ಎರಡು ಪ್ರತಿಭಟನೆಗಳು ನಡೆಯುತ್ತಿವೆ. ಹರಿಯಾಣಕ್ಕೆ ಹೊಂದಿಕೊಂಡಂತೆ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ನಡೆಯುತ್ತಿರುವುದು ಒಂದು ಬೃಹತ್ ಪ್ರತಿಭಟನೆಯಾದರೆ, ಅಲ್ಲಿಂದ 200 ಮೀಟರ್ ದೂರದಲ್ಲಿ ಅಂದರೆ ದೆಹಲಿ ವ್ಯಾಪ್ತಿಗೆ ಬರುವ ಸ್ಥಳದಲ್ಲಿ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ನೇತೃತ್ವದಲ್ಲಿ ಸಣ್ಣ ಪ್ರತಿಭಟನೆ ನಡೆಯುತ್ತಿದೆ. (ದೀಪ್ ಸಿಧು ಇದೇ ಸಂಘಟನೆಗೆ ಸೇರಿದ್ದು, ಮುಖ್ಯವಾಗಿ ಗಣರಾಜ್ಯೋತ್ಸವದ ದಿನ ನಿಯೋಜಿತ ಮಾರ್ಗ ಉಲ್ಲಂಘಿಸಿ, ಕೆಂಪು ಕೋಟೆಗೆ ನುಗ್ಗಿ ಧಾರ್ಮಿಕ ಧ್ವಜ ಹಾರಿಸಿದ್ದು ಇವರೆ ಎನ್ನಲಾಗಿದೆ)

ಈ ಭಾಗ ದೆಹಲಿ ಪೊಲೀಸರ ವ್ಯಾಪ್ತಿಗೆ ಬರುವುದರಿಂದ, ಜನವರಿ 27 ರಂದು ಸ್ಥಳೀಯರ ಹೆಸರಿನ ಗುಂಪು ಇಲ್ಲಿ ಪ್ರತಿಭಟನೆ ನಡೆಸಿದೆ. ಇದು ಇನ್ನೊಂದು ಹರಿಯಾಣದ ಬದಿಯಲ್ಲಿರುವ ರೈತ ಗುಂಪಿಗೆ ಗೊತ್ತಾಗಿಯೇ ಇಲ್ಲ. ಆದರೆ ಮಾಧ್ಯಮಗಳು ಇಡೀ ಸಿಂಘು ಗಡಿಯಲ್ಲಿ ಪ್ರತಿಭಟನೆ ಎಂದು ತಪ್ಪು ವರದಿ ಮಾಡಿವೆ. ಏಕೆಂದರೆ ಅಲ್ಲಿ 60 ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸುತ್ತಿದ್ದು ಯಾವು ಗುಂಪು ಸಹ ಅಲ್ಲಿಗೆ ನುಗ್ಗಿ ಪ್ರತಿಭಟನೆ ನಡೆಸುವ ಧೈರ್ಯ ತೋರುವುದಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆ: CPI(ML) ಅಭ್ಯರ್ಥಿಯನ್ನು ಬಾಂಬ್ ದಾಳಿ ಆರೋಪಿಯೆಂದು ಸುಳ್ಳು ಹರಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮ್ಮ ಈ ಪ್ರಾಮಾಣಿಕತೆಯ ವಾರ್ತೆಗಾಗಿ ನಾನು ಕಾಯುತ್ತಿರುತ್ತೇನೆ ಏಕೆಂದರೆ ಇವತ್ತಿನ ಮಾಧ್ಯಮ ಟಿ. ವಿ ಅವರು ಕೇವಲ ಒಂದು ಪಕ್ಷದ ಪರವಾಗಿ ಕೆಲಸ ಮಾಡುವುದು ತುಂಬಾ ನೋವಿನ ಪ್ರಸಂಗ. ಕೇವಲ ಟಿ. ಆರ್. ಪಿ ಗಾಗಿ ಕೆಲಸ ಮಾಡುವ ಚಾನೆಲ್ ಗಳು ನಮಗೆ ಬೇಕಿಲ್ಲ ನಮಗೆ ನಿಮ್ಮ ಸತ್ಯ ಸತ್ಯತೆ ಇರುವ ಮಾಹಿತಿಗಾಗಿ ನಾವು ದಿನ ನಿತ್ಯ ಕಾಯುತ್ತಿರುತ್ತೇವೆ. ಧನ್ಯವಾದಗಳು ಗೌರಿ. ಲಂಕೇಶ್. ??

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...