Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸಂಸತ್‌ ಆವರಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಪಕ್ಷಗಳ ಸಂಸದರು ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಇದೇ ವೇಳೆ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟಿಸಿ “ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಅಂಬೇಡ್ಕರ್ ಅವರನ್ನು ಹೀನಾಯವಾಗಿ ನಡೆಸಿಕೊಂಡಿದೆ. ಈಗ ಅಂಬೇಡ್ಕರ್ ಮೇಲೆ ಹುಸಿ ಅಭಿಮಾನ ತೋರಿಸುತ್ತಿದೆ” ಎಂದು ಘೋಷಣೆಗಳನ್ನು ಕೂಗಿದ್ದರು.

ಇಂಡಿಯಾ ಮತ್ತು ಎನ್‌ಡಿಎ ಸಂಸದರು ಸಂಸತ್‌ ದ್ವಾರದ ಬಳಿ ಮುಖಾಮುಖಿಯಾದಾಗ ಘರ್ಷಣೆ ಉಂಟಾಗಿತ್ತು. ತನ್ನ ಇಬ್ಬರು ಸಂಸದರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಳ್ಳಿದ್ದಾರೆ. ಇದರಿಂದ ಅವರು ನೆಲಕ್ಕೆ ಬಿದ್ದು ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್‌ ಕೂಡ, ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ. ಇದರಿಂದ ಅವರ ಮೊಣಕಾಲಿಗೆ ಗಾಯವಾಗಿದೆ ಎಂದು ಆರೋಪಿಸಿತ್ತು.

ಎರಡೂ ಕಡೆಯವರು ಪರಸ್ಪರ ಆರೋಪಗಳನ್ನು ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ದ ಬಿಜೆಪಿಯ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಂಸತ್ ದ್ವಾರದ ಬಳಿ ಸಂಸದರ ನಡುವೆ ಘರ್ಷಣೆ ಉಂಟಾದಾಗ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿದ್ದರು. ಅದನ್ನು ಕ್ಷಣ ಮಾತ್ರದಲ್ಲಿ ತಿರುಚಿದ ಬಿಜೆಪಿಯ ಹಲವು ಸಂಸದರು ಸುಳ್ಳು ಬರಹಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ವಿಡಿಯೋದಲ್ಲಿ ಏನಿದೆ?

ರಾಹುಲ್ ಗಾಂಧಿ ಮಾಧ್ಯಮಗಳಿಗೆ ನೀಡಿದ ಹೇಳಿಕೆ ಹೀಗಿದೆ…”ದೇಕಿಯೇ, ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಿ ಸೇ ಹಮ್ನೇ ಕುಚ್ ಹೋತಾ ನಹೀ ಹೈ..ಮಗರ್” (ನೋಡಿ, ಹೌದು ಅದು ಸಂಭವಿಸಿದೆ, ಅದು ಸಂಭವಿಸಿದೆ ಆದರೆ ಅದು ಸರಿ, ನಾವು ಗಲಾಟೆಯಿಂದ ವಿಚಲಿತರಾಗುವುದಿಲ್ಲ … ಆದರೆ …)

ರಾಹುಲ್ ಗಾಂಧಿ ಹೇಳಿಕೆಯ ವಿಡಿಯೋವನ್ನು ಡಿ. 19ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು “ರಾಹುಲ್ ಗಾಂಧಿಯೇ ತಾನು ತಳ್ಳಿದ್ದೇನೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ತಳ್ಳುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರ ತಳ್ಳುವಿಕೆಯಿಂದಾಗಿ, ಹಿರಿಯ ಸಂಸದರ ತಲೆಗೆ ಗಾಯವಾಗಿದೆ, ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಳ್ಳುವಿಕೆಯಿಂದ ಏನೂ ಆಗುವುದಿಲ್ಲ ಎಂದು ರಾಹುಲ್ ಜಿ ಹೇಳುತ್ತಿದ್ದಾರೆ. ದುರಹಂಕಾರ, ದಬ್ಬಾಳಿಕೆ ಮತ್ತು ಸರ್ವಾಧಿಕಾರವು ಗಾಂಧಿ ಕುಟುಂಬದ ರಕ್ತನಾಳಗಳಲ್ಲಿ ಓಡುತ್ತಿದೆ … ನಾಚಿಕೆಗೇಡಿನ ಸಂಗತಿ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು.

ಬಿಜೆಪಿ ಪಕ್ಷದ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಉಸ್ತುವಾರಿಯಾಗಿರುವ ಅಮಿತ್ ಮಾಳವಿಯಾ ಅವರು ಡಿ.19ರಂದು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರ ಮೇಲೆ ಹಲ್ಲೆ ಮಾಡಿರುವುದಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಯಾಮರಾ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಿಜೆಪಿಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡ ಡಿ.19ರಂದು ಎಕ್ಸ್‌ನ ವಿಡಿಯೋ ಹಂಚಿಕೊಂಡು, “ಬಿಜೆಪಿ ಸಂಸದರ ಮೇಲೆ ದೌರ್ಜನ್ಯ ನಡೆಸಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಪ್ರತಿಪಾದನೆಯೊಂದಿಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನವಾಲಾ, ಪಕ್ಷದ ಗುಜರಾತ್ ಘಟಕದ ಮಾಧ್ಯಮ ವಿಭಾಗದ ಸಹ-ಉಸ್ತುವಾರಿ ಝುಬಿನ್ ಅಶಾರ ಮತ್ತು ಬಿಜೆಪಿ ಅಸ್ಸಾ ರಾಜ್ಯ ಘಟಕದ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಈ ಹಿಂದೆ ಹಲವಾರು ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಮಿ.ಸಿನ್ಹಾ ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ನಾಯಕರು ಹಂಚಿಕೊಂಡ ಬಳಿಕ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಹಾಗಾಗಿ, ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದ್ದ ವಿಡಿಯೊಂದರ ಒಂದು ಭಾಗ (ಕ್ಲಿಪ್) ಎಂದು ಗೊತ್ತಾಗಿದೆ.

ಎಎನ್‌ಐ ಹಂಚಿಕೊಂಡಿದ್ದ ಸಂಪೂರ್ಣ ವಿಡಿಯೋ ಕೆಳಗಿದೆ…

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋವನ್ನು ನಾವು ಸಂಪೂರ್ಣ ವೀಕ್ಷಿಸಿದ್ದೇವೆ. ಈ ವೇಳೆ ನಮಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಿದೆ.

ರಾಹುಲ್ ಗಾಂಧಿಯವರು ಸಂಸತ್ ಬಳಿ ನಡೆದ ಘರ್ಷಣೆಯ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ವರದಿಗಾರರೊಬ್ಬರು “ಖರ್ಗೆ ಜಿ ಕೆ ಸಾತ್ ಧಕ್ಕಾ-ಮುಕ್ಕಿ ಹುವಾ ಹೈ?” (ಖರ್ಗೆಯವರನ್ನೂ ತಳ್ಳಲಾಗಿದೆಯೇ?) ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ “ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಾ ಸೇ ಹಮ್ನೇ ಕುಚ್ ಹೋತಾ ನಹೀ ಹೈ..”(ಹೌದು, ಅದು ಸಂಭವಿಸಿದೆ, ಅದು ಸಂಭವಿದೆ, ಆದರೂ, ಪರವಾಗಿಲ್ಲ..ತಳ್ಳಾಟ ಮತ್ತು ನೂಕಾಟ ನಮ್ಮ ಮೇಲೆ ಯಾವುದೇ ಪರಣಾಮ ಬಿರುವುದಿಲ್ಲ ) ಎಂದು ಹೇಳಿದ್ದಾರೆ.

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋ ಜೊತೆಗೆ ರಾಹುಲ್ ಗಾಂಧಿಯ ಹೇಳಿಕೆಯನ್ನು ಅಕ್ಷರ ರೂಪದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಅದರಲ್ಲಿ(yes, this happend (ಹೌದು, ಅದು ಸಂಭವಿಸಿದೆ (ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಲಾಗಿದೆ) ಎಂದು ಎಎನ್‌ಐ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಎಎನ್‌ಐ ಇದೇ ವಿಷಯದಲ್ಲಿ ಪ್ರಕಟಿಸಿರುವ ಮತ್ತೊಂದು ವಿಸ್ಕೃತ ವರದಿಯಲ್ಲೂ ಇದೇ ಸಾಲುಗಳನ್ನು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮಾಧ್ಯಮದವರು ಕೇಳಿದಾಗ “ಹೌದು, ಅದು ಸಂಭವಿಸಿದೆ ಅಥವಾ ಅಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು. ಅಂದರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ತಳ್ಳಲಾಗಿದೆಯಾ? ಎಂದು ವರದಿಗಾರರು ಕೇಳಿದ್ದಕ್ಕೆ ” ಹೌದು, ತಳ್ಳಲಾಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ ಅಥವಾ ಅದು ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಅಲ್ಲದೆ, ಬಿಜೆಪಿ ಸಂಸದರನ್ನು ತಳ್ಳಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಲ್ಲ. ಬಿಜೆಪಿ ಸಂಸದರು ಎಎನ್‌ಐ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಅರ್ಧ ಮಾತ್ರ ಹಂಚಿಕೊಂಡು ಸುಳ್ಳು ಪ್ರತಿಪಾದನೆ ಮಾಡಿದ್ದಾರೆ.

ಇದನ್ನೂ ಓದಿ : FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...