Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸಂಸತ್‌ ಆವರಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಪಕ್ಷಗಳ ಸಂಸದರು ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಇದೇ ವೇಳೆ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟಿಸಿ “ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಅಂಬೇಡ್ಕರ್ ಅವರನ್ನು ಹೀನಾಯವಾಗಿ ನಡೆಸಿಕೊಂಡಿದೆ. ಈಗ ಅಂಬೇಡ್ಕರ್ ಮೇಲೆ ಹುಸಿ ಅಭಿಮಾನ ತೋರಿಸುತ್ತಿದೆ” ಎಂದು ಘೋಷಣೆಗಳನ್ನು ಕೂಗಿದ್ದರು.

ಇಂಡಿಯಾ ಮತ್ತು ಎನ್‌ಡಿಎ ಸಂಸದರು ಸಂಸತ್‌ ದ್ವಾರದ ಬಳಿ ಮುಖಾಮುಖಿಯಾದಾಗ ಘರ್ಷಣೆ ಉಂಟಾಗಿತ್ತು. ತನ್ನ ಇಬ್ಬರು ಸಂಸದರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಳ್ಳಿದ್ದಾರೆ. ಇದರಿಂದ ಅವರು ನೆಲಕ್ಕೆ ಬಿದ್ದು ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್‌ ಕೂಡ, ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ. ಇದರಿಂದ ಅವರ ಮೊಣಕಾಲಿಗೆ ಗಾಯವಾಗಿದೆ ಎಂದು ಆರೋಪಿಸಿತ್ತು.

ಎರಡೂ ಕಡೆಯವರು ಪರಸ್ಪರ ಆರೋಪಗಳನ್ನು ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ದ ಬಿಜೆಪಿಯ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಂಸತ್ ದ್ವಾರದ ಬಳಿ ಸಂಸದರ ನಡುವೆ ಘರ್ಷಣೆ ಉಂಟಾದಾಗ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿದ್ದರು. ಅದನ್ನು ಕ್ಷಣ ಮಾತ್ರದಲ್ಲಿ ತಿರುಚಿದ ಬಿಜೆಪಿಯ ಹಲವು ಸಂಸದರು ಸುಳ್ಳು ಬರಹಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ವಿಡಿಯೋದಲ್ಲಿ ಏನಿದೆ?

ರಾಹುಲ್ ಗಾಂಧಿ ಮಾಧ್ಯಮಗಳಿಗೆ ನೀಡಿದ ಹೇಳಿಕೆ ಹೀಗಿದೆ…”ದೇಕಿಯೇ, ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಿ ಸೇ ಹಮ್ನೇ ಕುಚ್ ಹೋತಾ ನಹೀ ಹೈ..ಮಗರ್” (ನೋಡಿ, ಹೌದು ಅದು ಸಂಭವಿಸಿದೆ, ಅದು ಸಂಭವಿಸಿದೆ ಆದರೆ ಅದು ಸರಿ, ನಾವು ಗಲಾಟೆಯಿಂದ ವಿಚಲಿತರಾಗುವುದಿಲ್ಲ … ಆದರೆ …)

ರಾಹುಲ್ ಗಾಂಧಿ ಹೇಳಿಕೆಯ ವಿಡಿಯೋವನ್ನು ಡಿ. 19ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು “ರಾಹುಲ್ ಗಾಂಧಿಯೇ ತಾನು ತಳ್ಳಿದ್ದೇನೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ತಳ್ಳುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರ ತಳ್ಳುವಿಕೆಯಿಂದಾಗಿ, ಹಿರಿಯ ಸಂಸದರ ತಲೆಗೆ ಗಾಯವಾಗಿದೆ, ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಳ್ಳುವಿಕೆಯಿಂದ ಏನೂ ಆಗುವುದಿಲ್ಲ ಎಂದು ರಾಹುಲ್ ಜಿ ಹೇಳುತ್ತಿದ್ದಾರೆ. ದುರಹಂಕಾರ, ದಬ್ಬಾಳಿಕೆ ಮತ್ತು ಸರ್ವಾಧಿಕಾರವು ಗಾಂಧಿ ಕುಟುಂಬದ ರಕ್ತನಾಳಗಳಲ್ಲಿ ಓಡುತ್ತಿದೆ … ನಾಚಿಕೆಗೇಡಿನ ಸಂಗತಿ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು.

ಬಿಜೆಪಿ ಪಕ್ಷದ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಉಸ್ತುವಾರಿಯಾಗಿರುವ ಅಮಿತ್ ಮಾಳವಿಯಾ ಅವರು ಡಿ.19ರಂದು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರ ಮೇಲೆ ಹಲ್ಲೆ ಮಾಡಿರುವುದಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಯಾಮರಾ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಿಜೆಪಿಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡ ಡಿ.19ರಂದು ಎಕ್ಸ್‌ನ ವಿಡಿಯೋ ಹಂಚಿಕೊಂಡು, “ಬಿಜೆಪಿ ಸಂಸದರ ಮೇಲೆ ದೌರ್ಜನ್ಯ ನಡೆಸಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಪ್ರತಿಪಾದನೆಯೊಂದಿಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನವಾಲಾ, ಪಕ್ಷದ ಗುಜರಾತ್ ಘಟಕದ ಮಾಧ್ಯಮ ವಿಭಾಗದ ಸಹ-ಉಸ್ತುವಾರಿ ಝುಬಿನ್ ಅಶಾರ ಮತ್ತು ಬಿಜೆಪಿ ಅಸ್ಸಾ ರಾಜ್ಯ ಘಟಕದ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಈ ಹಿಂದೆ ಹಲವಾರು ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಮಿ.ಸಿನ್ಹಾ ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ನಾಯಕರು ಹಂಚಿಕೊಂಡ ಬಳಿಕ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಹಾಗಾಗಿ, ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದ್ದ ವಿಡಿಯೊಂದರ ಒಂದು ಭಾಗ (ಕ್ಲಿಪ್) ಎಂದು ಗೊತ್ತಾಗಿದೆ.

ಎಎನ್‌ಐ ಹಂಚಿಕೊಂಡಿದ್ದ ಸಂಪೂರ್ಣ ವಿಡಿಯೋ ಕೆಳಗಿದೆ…

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋವನ್ನು ನಾವು ಸಂಪೂರ್ಣ ವೀಕ್ಷಿಸಿದ್ದೇವೆ. ಈ ವೇಳೆ ನಮಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಿದೆ.

ರಾಹುಲ್ ಗಾಂಧಿಯವರು ಸಂಸತ್ ಬಳಿ ನಡೆದ ಘರ್ಷಣೆಯ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ವರದಿಗಾರರೊಬ್ಬರು “ಖರ್ಗೆ ಜಿ ಕೆ ಸಾತ್ ಧಕ್ಕಾ-ಮುಕ್ಕಿ ಹುವಾ ಹೈ?” (ಖರ್ಗೆಯವರನ್ನೂ ತಳ್ಳಲಾಗಿದೆಯೇ?) ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ “ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಾ ಸೇ ಹಮ್ನೇ ಕುಚ್ ಹೋತಾ ನಹೀ ಹೈ..”(ಹೌದು, ಅದು ಸಂಭವಿಸಿದೆ, ಅದು ಸಂಭವಿದೆ, ಆದರೂ, ಪರವಾಗಿಲ್ಲ..ತಳ್ಳಾಟ ಮತ್ತು ನೂಕಾಟ ನಮ್ಮ ಮೇಲೆ ಯಾವುದೇ ಪರಣಾಮ ಬಿರುವುದಿಲ್ಲ ) ಎಂದು ಹೇಳಿದ್ದಾರೆ.

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋ ಜೊತೆಗೆ ರಾಹುಲ್ ಗಾಂಧಿಯ ಹೇಳಿಕೆಯನ್ನು ಅಕ್ಷರ ರೂಪದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಅದರಲ್ಲಿ(yes, this happend (ಹೌದು, ಅದು ಸಂಭವಿಸಿದೆ (ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಲಾಗಿದೆ) ಎಂದು ಎಎನ್‌ಐ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಎಎನ್‌ಐ ಇದೇ ವಿಷಯದಲ್ಲಿ ಪ್ರಕಟಿಸಿರುವ ಮತ್ತೊಂದು ವಿಸ್ಕೃತ ವರದಿಯಲ್ಲೂ ಇದೇ ಸಾಲುಗಳನ್ನು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮಾಧ್ಯಮದವರು ಕೇಳಿದಾಗ “ಹೌದು, ಅದು ಸಂಭವಿಸಿದೆ ಅಥವಾ ಅಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು. ಅಂದರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ತಳ್ಳಲಾಗಿದೆಯಾ? ಎಂದು ವರದಿಗಾರರು ಕೇಳಿದ್ದಕ್ಕೆ ” ಹೌದು, ತಳ್ಳಲಾಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ ಅಥವಾ ಅದು ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಅಲ್ಲದೆ, ಬಿಜೆಪಿ ಸಂಸದರನ್ನು ತಳ್ಳಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಲ್ಲ. ಬಿಜೆಪಿ ಸಂಸದರು ಎಎನ್‌ಐ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಅರ್ಧ ಮಾತ್ರ ಹಂಚಿಕೊಂಡು ಸುಳ್ಳು ಪ್ರತಿಪಾದನೆ ಮಾಡಿದ್ದಾರೆ.

ಇದನ್ನೂ ಓದಿ : FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...