Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

FACT CHECK : ರಾಹುಲ್ ಗಾಂಧಿ ಹೇಳಿಕೆಯನ್ನು ತಿರುಚಿ ಹಂಚಿಕೊಂಡ ಬಿಜೆಪಿ ನಾಯಕರು

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಡಿಸೆಂಬರ್ 19ರಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಸಂಸತ್‌ ಆವರಣದಲ್ಲಿ ಮೆರವಣಿಗೆ ನಡೆಸಿದ ಪ್ರತಿಪಕ್ಷಗಳ ಸಂಸದರು ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು. ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.

ಇದೇ ವೇಳೆ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟಿಸಿ “ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಅಂಬೇಡ್ಕರ್ ಅವರನ್ನು ಹೀನಾಯವಾಗಿ ನಡೆಸಿಕೊಂಡಿದೆ. ಈಗ ಅಂಬೇಡ್ಕರ್ ಮೇಲೆ ಹುಸಿ ಅಭಿಮಾನ ತೋರಿಸುತ್ತಿದೆ” ಎಂದು ಘೋಷಣೆಗಳನ್ನು ಕೂಗಿದ್ದರು.

ಇಂಡಿಯಾ ಮತ್ತು ಎನ್‌ಡಿಎ ಸಂಸದರು ಸಂಸತ್‌ ದ್ವಾರದ ಬಳಿ ಮುಖಾಮುಖಿಯಾದಾಗ ಘರ್ಷಣೆ ಉಂಟಾಗಿತ್ತು. ತನ್ನ ಇಬ್ಬರು ಸಂಸದರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಳ್ಳಿದ್ದಾರೆ. ಇದರಿಂದ ಅವರು ನೆಲಕ್ಕೆ ಬಿದ್ದು ಗಾಯಗಳಾಗಿವೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್‌ ಕೂಡ, ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ. ಇದರಿಂದ ಅವರ ಮೊಣಕಾಲಿಗೆ ಗಾಯವಾಗಿದೆ ಎಂದು ಆರೋಪಿಸಿತ್ತು.

ಎರಡೂ ಕಡೆಯವರು ಪರಸ್ಪರ ಆರೋಪಗಳನ್ನು ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್‌ನ ರಾಹುಲ್ ಗಾಂಧಿ ವಿರುದ್ದ ಬಿಜೆಪಿಯ ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಂಸತ್ ದ್ವಾರದ ಬಳಿ ಸಂಸದರ ನಡುವೆ ಘರ್ಷಣೆ ಉಂಟಾದಾಗ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮಗಳಿಗೆ ಹೇಳಿಕೆಯೊಂದನ್ನು ನೀಡಿದ್ದರು. ಅದನ್ನು ಕ್ಷಣ ಮಾತ್ರದಲ್ಲಿ ತಿರುಚಿದ ಬಿಜೆಪಿಯ ಹಲವು ಸಂಸದರು ಸುಳ್ಳು ಬರಹಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ವಿಡಿಯೋದಲ್ಲಿ ಏನಿದೆ?

ರಾಹುಲ್ ಗಾಂಧಿ ಮಾಧ್ಯಮಗಳಿಗೆ ನೀಡಿದ ಹೇಳಿಕೆ ಹೀಗಿದೆ…”ದೇಕಿಯೇ, ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಿ ಸೇ ಹಮ್ನೇ ಕುಚ್ ಹೋತಾ ನಹೀ ಹೈ..ಮಗರ್” (ನೋಡಿ, ಹೌದು ಅದು ಸಂಭವಿಸಿದೆ, ಅದು ಸಂಭವಿಸಿದೆ ಆದರೆ ಅದು ಸರಿ, ನಾವು ಗಲಾಟೆಯಿಂದ ವಿಚಲಿತರಾಗುವುದಿಲ್ಲ … ಆದರೆ …)

ರಾಹುಲ್ ಗಾಂಧಿ ಹೇಳಿಕೆಯ ವಿಡಿಯೋವನ್ನು ಡಿ. 19ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು “ರಾಹುಲ್ ಗಾಂಧಿಯೇ ತಾನು ತಳ್ಳಿದ್ದೇನೆ ಎಂದು ಒಪ್ಪಿಕೊಳ್ಳುತ್ತಿದ್ದಾರೆ ಮತ್ತು ತಳ್ಳುವುದರಿಂದ ಏನನ್ನೂ ಸಾಧಿಸಲಾಗುವುದಿಲ್ಲ ಎಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ಅವರ ತಳ್ಳುವಿಕೆಯಿಂದಾಗಿ, ಹಿರಿಯ ಸಂಸದರ ತಲೆಗೆ ಗಾಯವಾಗಿದೆ, ಇಬ್ಬರು ಸಂಸದರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಳ್ಳುವಿಕೆಯಿಂದ ಏನೂ ಆಗುವುದಿಲ್ಲ ಎಂದು ರಾಹುಲ್ ಜಿ ಹೇಳುತ್ತಿದ್ದಾರೆ. ದುರಹಂಕಾರ, ದಬ್ಬಾಳಿಕೆ ಮತ್ತು ಸರ್ವಾಧಿಕಾರವು ಗಾಂಧಿ ಕುಟುಂಬದ ರಕ್ತನಾಳಗಳಲ್ಲಿ ಓಡುತ್ತಿದೆ … ನಾಚಿಕೆಗೇಡಿನ ಸಂಗತಿ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದರು.

ಬಿಜೆಪಿ ಪಕ್ಷದ ಮಾಹಿತಿ ತಂತ್ರಜ್ಞಾನ (ಐಟಿ) ವಿಭಾಗದ ಉಸ್ತುವಾರಿಯಾಗಿರುವ ಅಮಿತ್ ಮಾಳವಿಯಾ ಅವರು ಡಿ.19ರಂದು ಎಕ್ಸ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಂಡಿದ್ದು, “ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರ ಮೇಲೆ ಹಲ್ಲೆ ಮಾಡಿರುವುದಾಗಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಯಾಮರಾ ಮುಂದೆ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಿಜೆಪಿಯ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡ ಡಿ.19ರಂದು ಎಕ್ಸ್‌ನ ವಿಡಿಯೋ ಹಂಚಿಕೊಂಡು, “ಬಿಜೆಪಿ ಸಂಸದರ ಮೇಲೆ ದೌರ್ಜನ್ಯ ನಡೆಸಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಪ್ರತಿಪಾದನೆಯೊಂದಿಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನವಾಲಾ, ಪಕ್ಷದ ಗುಜರಾತ್ ಘಟಕದ ಮಾಧ್ಯಮ ವಿಭಾಗದ ಸಹ-ಉಸ್ತುವಾರಿ ಝುಬಿನ್ ಅಶಾರ ಮತ್ತು ಬಿಜೆಪಿ ಅಸ್ಸಾ ರಾಜ್ಯ ಘಟಕದ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಈ ಹಿಂದೆ ಹಲವಾರು ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಮಿ.ಸಿನ್ಹಾ ಕೂಡ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಬಿಜೆಪಿ ನಾಯಕರು ಹಂಚಿಕೊಂಡ ಬಳಿಕ ರಾಹುಲ್ ಗಾಂಧಿಯ ಹೇಳಿಕೆಯ ವಿಡಿಯೋ ವೈರಲ್ ಆಗಿತ್ತು. ಹಾಗಾಗಿ, ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿದ್ದ ವಿಡಿಯೊಂದರ ಒಂದು ಭಾಗ (ಕ್ಲಿಪ್) ಎಂದು ಗೊತ್ತಾಗಿದೆ.

ಎಎನ್‌ಐ ಹಂಚಿಕೊಂಡಿದ್ದ ಸಂಪೂರ್ಣ ವಿಡಿಯೋ ಕೆಳಗಿದೆ…

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋವನ್ನು ನಾವು ಸಂಪೂರ್ಣ ವೀಕ್ಷಿಸಿದ್ದೇವೆ. ಈ ವೇಳೆ ನಮಗೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಿದೆ.

ರಾಹುಲ್ ಗಾಂಧಿಯವರು ಸಂಸತ್ ಬಳಿ ನಡೆದ ಘರ್ಷಣೆಯ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ, ವರದಿಗಾರರೊಬ್ಬರು “ಖರ್ಗೆ ಜಿ ಕೆ ಸಾತ್ ಧಕ್ಕಾ-ಮುಕ್ಕಿ ಹುವಾ ಹೈ?” (ಖರ್ಗೆಯವರನ್ನೂ ತಳ್ಳಲಾಗಿದೆಯೇ?) ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ “ಹಾನ್ ಕಿಯಾ ಹೈ, ಕಿಯಾ ಹೈ, ಮಗರ್ ಟೀಕ್ ಹೈ…ಧಕ್ಕಾ-ಮುಕ್ಕಾ ಸೇ ಹಮ್ನೇ ಕುಚ್ ಹೋತಾ ನಹೀ ಹೈ..”(ಹೌದು, ಅದು ಸಂಭವಿಸಿದೆ, ಅದು ಸಂಭವಿದೆ, ಆದರೂ, ಪರವಾಗಿಲ್ಲ..ತಳ್ಳಾಟ ಮತ್ತು ನೂಕಾಟ ನಮ್ಮ ಮೇಲೆ ಯಾವುದೇ ಪರಣಾಮ ಬಿರುವುದಿಲ್ಲ ) ಎಂದು ಹೇಳಿದ್ದಾರೆ.

ಎಎನ್‌ಐ ಹಂಚಿಕೊಂಡಿದ್ದ ವಿಡಿಯೋ ಜೊತೆಗೆ ರಾಹುಲ್ ಗಾಂಧಿಯ ಹೇಳಿಕೆಯನ್ನು ಅಕ್ಷರ ರೂಪದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಅದರಲ್ಲಿ(yes, this happend (ಹೌದು, ಅದು ಸಂಭವಿಸಿದೆ (ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಲಾಗಿದೆ) ಎಂದು ಎಎನ್‌ಐ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಎಎನ್‌ಐ ಇದೇ ವಿಷಯದಲ್ಲಿ ಪ್ರಕಟಿಸಿರುವ ಮತ್ತೊಂದು ವಿಸ್ಕೃತ ವರದಿಯಲ್ಲೂ ಇದೇ ಸಾಲುಗಳನ್ನು ಉಲ್ಲೇಖಿಸಲಾಗಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮಾಧ್ಯಮದವರು ಕೇಳಿದಾಗ “ಹೌದು, ಅದು ಸಂಭವಿಸಿದೆ ಅಥವಾ ಅಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು. ಅಂದರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ತಳ್ಳಲಾಗಿದೆಯಾ? ಎಂದು ವರದಿಗಾರರು ಕೇಳಿದ್ದಕ್ಕೆ ” ಹೌದು, ತಳ್ಳಲಾಗಿದೆ. ಆದರೆ, ಅದರ ಬಗ್ಗೆ ನಾವು ತಲೆ ಕೆಡಸಿಕೊಳ್ಳುವುದಿಲ್ಲ ಅಥವಾ ಅದು ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ರಾಹುಲ್ ಗಾಂಧಿ ಉತ್ತರಿಸಿದ್ದಾರೆ. ಅಲ್ಲದೆ, ಬಿಜೆಪಿ ಸಂಸದರನ್ನು ತಳ್ಳಿರುವುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿರುವುದಲ್ಲ. ಬಿಜೆಪಿ ಸಂಸದರು ಎಎನ್‌ಐ ಪೋಸ್ಟ್ ಮಾಡಿದ್ದ ವಿಡಿಯೋವನ್ನು ಅರ್ಧ ಮಾತ್ರ ಹಂಚಿಕೊಂಡು ಸುಳ್ಳು ಪ್ರತಿಪಾದನೆ ಮಾಡಿದ್ದಾರೆ.

ಇದನ್ನೂ ಓದಿ : FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...