Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?”

“ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ ಮತ್ತು ಇನ್ನೂ ಅನೇಕ ವಿಭಜಿಸುವ ಕಾರ್ಯಸೂಚಿಗಳು”

“ಕಾಂಗ್ರೆಸ್‌ನ ಕೆಟ್ಟ ಉದ್ದೇಶ ಸ್ಪಷ್ಟವಾಗಿದೆ: ಭಾರತೀಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅದನ್ನು ಮುಸ್ಲಿಮರಿಗೆ ಉಡುಗೊರೆಯಾಗಿ ನೀಡುವುದು. ಅವರು ನಮ್ಮ ಭೂಮಿ, ಸಂಪತ್ತು ಮತ್ತು ಹಕ್ಕುಗಳನ್ನು ವಶಪಡಿಸಿಕೊಳ್ಳುತ್ತಾರೆ, ಅವುಗಳನ್ನು ‘ಶಾಂತಿಯುತರಿಗೆ’ ಉಡುಗೊರೆಯಾಗಿ ನೀಡುತ್ತಾರೆ”

“ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಈ ರೀತಿ ಪೋಸ್ಟ್ ಒಂದನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಕೆಲ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಹೇಳಿರುವಂತೆ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಮುಸ್ಲಿಂ ಪರ ಭರವಸೆಗಳನ್ನು ನೀಡಲಾಗಿದೆಯಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು, ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯ 7 ಮತ್ತು 8ನೇ ಪುಟಗಳಲ್ಲಿ ‘ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ’ ಸಂಬಂಧಪಟ್ಟಂತೆ ಭರವಸೆಗಳನ್ನು ನೀಡಲಾಗಿದೆ. ಅವುಗಳು ಹೀಗಿವೆ..

1. ಸಂವಿಧಾನದ 15, 16, 25, 26, 28, 29 ಮತ್ತು 30ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತೇವೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

‘ನ್ಯಾಯಪತ್ರ’ ಎಂಬ ಹೆಸರಿನ 48 ಪುಟಗಳ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲೂ ಬಿಜೆಪಿ ಹೇಳಿದಂತೆ “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ” ಎಂಬ ಭರವಸೆಗಳನ್ನು ನೀಡಿಲ್ಲ.

ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ 5 ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದೆ. ಅದರಲ್ಲೂ ಬಿಜೆಪಿ ಉಲ್ಲೇಖಿಸಿದ ಅಂಶಗಳು ಇಲ್ಲ.

1. ಬಿಜೆಪಿ ಹಂಚಿಕೊಂಡ ಸ್ಕ್ರೀನ್ ಶಾಟ್‌ಗಳಲ್ಲಿ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸುತ್ತೇವೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತೇವೆ.

2. ಸಂವಿಧಾನಕ್ಕೆ ತಿದ್ದುಪಡಿ ತಂದು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ 50 ಶೇ. ಮಿತಿಯನ್ನು ತೆಗೆಯುತ್ತೇವೆ.

3. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

4. ಕಾಂಗ್ರೆಸ್ ವೈವಿಧ್ಯ ಆಯೋಗ ಸ್ಥಾಪಿಸಲಿದೆ, ಮಹಿಳೆಯರು ಮತ್ತು ಎಸ್‌ಸಿ ,ಎಸ್‌ಟಿ ಮತ್ತು ಒಬಿಸಿ ಮತ್ತು ಅಲ್ಪ ಸಂಖ್ಯಾತ ವರ್ಗದ ಹೆಚ್ಚು ಜನರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದು ಹೇಳಿದೆ.

ಪ್ರಮುಖ ವಿಷಯವೆಂದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ನೀಡಿದ ಭರವಸೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಅಲ್ಪ ಸಂಖ್ಯಾತರು ಎಂದು ಉಲ್ಲೇಖಿಸಿದೆಯೇ ಹೊರತು, ಎಲ್ಲೂ ಮುಸ್ಲಿಮರಿಗೆ ಎಂದು ಹೇಳಿಲ್ಲ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿಗಳು ಈ ದೇಶದ ಅಲ್ಪ ಸಂಖ್ಯಾತರು. ಹಾಗಾಗಿ, ಪ್ರಣಾಳಿಕೆಯಲ್ಲಿ ಅಲ್ಪ ಸಂಖ್ಯಾತರು ಎಂದರೂ, ಅದು ಕೇವಲ ಮುಸ್ಲಿಮರು ಎಂದು ಆಗುವುದಿಲ್ಲ.

ಹಾಗಾಗಿ, ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಹಾಕಿರುವ ಪೋಸ್ಟ್ ಸಂಪೂರ್ಣ ಸುಳ್ಳು. ಇದೇ ರೀತಿಯ ಸುಳ್ಳು ಪೋಸ್ಟ್ ಅನ್ನು ಕೆಲ ದಿನಗಳ ಹಿಂದೆ ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಹಾಕಿದ್ದ. “ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ” ಎಂದಿದ್ದ. ಆಗ ನಾನುಗೌರಿ. ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

ಬಿಜೆಪಿ ತನ್ನ ಪೋಸ್ಟ್‌ನಲ್ಲಿ “ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಎಂದು ಹೇಳಿದೆ. ಈ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ.

ಆದರೆ, “ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟಿವಿ9 ಸುದ್ದಿ ವಾಹಿನಿಯ ಹಳೆಯ ವಿಡಿಯೋವೊಂದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹಂಚಿಕೊಂಡಿದ್ದರು. ಈ ಬಗ್ಗೆಯೂ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?  

ಇದನ್ನೂ ಓದಿ : FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...