Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...