Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...