Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...