Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...