Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...