Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...