Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...