Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....