Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...