Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...