Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...