Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

ಫ್ಯಾಕ್ಟ್‌ಚೆಕ್ | ಉರಿಯುತ್ತಿರುವ ಚಿತೆಯ ಮೇಲೆ ವೃದ್ಧ ಮಲಗಿರುವ ಈ ವಿಡಿಯೊ ಮಹಾಕುಂಭದ್ದಲ್ಲ

- Advertisement -
- Advertisement -

ಉರಿಯುತ್ತಿರುವ ಚಿತೆಯ ಮೇಲೆ ವೃದ್ಧರೊಬ್ಬರು ಮಲಗಿರುವ ರೀತಿಯಲ್ಲಿ ಕಾಣುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಕಂಡು ಬಂದ ಅಗ್ನಿ ಸ್ನಾನದ ಘಟನೆ ಎಂದು ಪ್ರತಿಪಾದಿಸಿ ವೈರಲ್ ಮಾಡಲಾಗುತ್ತಿದೆ.ಈ ವೀಡಿಯೊದಲ್ಲಿ ವೃದ್ಧ ವ್ಯಕ್ತಿಯ ಬಟ್ಟೆ ಅಥವಾ ಕೂದಲಿಗೆ ಬೆಂಕಿ ತಹುಲುವುದಿಲ್ಲ ಅಥವಾ ಅವರ ದೇಹದ ಯಾವುದೇ ಭಾಗ ಸುಡುವುದಿಲ್ಲ ಎಂದು ಪ್ರತಿಪಾದಿಸಲಾಗಿದೆ. ಫ್ಯಾಕ್ಟ್‌ಚೆಕ್

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚುಕೊಂಡಿದ್ದು, ‘‘ಹರಿದ್ವಾರದ ಮಾಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಜಲ ಸ್ನಾನ ದ ಮೊದಲು ಭಾರತದ ಸಾಧು ಸಂತರು ಅಗ್ನಿ ಸ್ನಾನ ಮಾಡಿದ್ದನ್ನು ಪ್ರತ್ಯಕ್ಷ ಕಂಡ ಬಿ.ಬಿ.ಸಿ.ಚಾನೆಲ್ ವರದಿಗಾರ ಬಹಳ ಚಕಿತನಾಗಿ ಹೋದ. ಸದಾ ಹಿಂದು ಸನಾತನ ಧಮ೯ವನ್ನು ತಮ್ಮ ಚಾನೆಲ್ ನ ಕಾಯ೯ಕ್ರಮಗಳಲ್ಲಿ ಹೀನಾಯವಾಗಿ ತೋರಿಸುವ ಬಿ.ಬಿ.ಸಿ. ಚಾನೆಲ್ ಇಂದು ತಮ್ಮ ಚಾನೆಲ್ ನಲ್ಲಿ ಭಾರತೀಯ ಸಂತರ ಬಗ್ಗೆ ಗೌರವ ಪೂರ್ವಕವಾಗಿ ಜಗತ್ತಿನ ಜನರಿಗೆ ತೋರಿಸುವುದು ಅನಿವಾರ್ಯವಾಯಿತು’’ ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,
ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್:

ಈ ವಿಡಿಯೊ ಬಗ್ಗೆ ಹುಡುಕಾಡಿದಾಗ, ವೈರಲ್ ವಿಡಿಯೊ ಜೊತೆಗೆ ಹರಿದಾಡುತ್ತಿರುವ ಕುಂಭಮೇಳದ ಹೇಳಿಕೆಗೂ, ವೀಡಿಯೊಗೂ ಯಾವುದೆ ಸಂಬಂದ ಇಲ್ಲ ಎಂದು ಕಂಡುಬಂದಿದೆ. ಅಷ್ಟೆ ಅಲ್ಲದೆ, ಈ ಘಟನೆಯನ್ನು ಬಿಬಿಸಿ ವರದಿ ಮಾಡಿಲ್ಲ ಎಂದು ತಿಳಿದುಬಂದಿದೆ. ವಾಸ್ತವದಲ್ಲಿ ಇದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ವಾಸಿಸುತ್ತಿರುವ ಸಾಧು ಒಬ್ಬರ ಸಾಕ್ಷ್ಯಚಿತ್ರದ ವೀಡಿಯೊವಾಗಿದೆ.

ವಾಸ್ತವ ತಿಳಿಯಲು ವೈರಲ್ ವೀಡಿಯೊದ ಕೆಲವು ಕೀ-ಫ್ರೇಮ್​ಗಳನ್ನು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದ್ದು, ಆಗ ಈ ವೀಡಿಯೊವನ್ನು ಹಲವು ಯೂಟ್ಯೂಬ್ ಚಾನಲ್‌ಗಳಲ್ಲಿ ಅಪ್‌ಲೋಡ್ ಆಗಿರುವುದು ಕಂಡು ಬಂದಿವೆ.

2009ರ ನವೆಂಬರ್ 18 ರಂದು ಆಜ್‌ತಕ್‌ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೈರಲ್ ವಿಡಿಯೊದಲ್ಲಿರುವ ವೃದ್ಧ ವ್ಯಕ್ತಿಯ ಬಗ್ಗೆ ವೀಡಿಯೊವನ್ನು ಹಂಚಿಕೊಂಡಿದೆ. ಆಜ್‌ತಕ್ ಈ ವೀಡಿಯೊವನ್ನು ನಾಲ್ಕು ಭಾಗಗಳಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ತಂಜಾವೂರಿನ ಶ್ರೀ ರಾಮಭಾವು ಸ್ವಾಮಿ ಕೇಸರಿ ವಸ್ತ್ರಗಳನ್ನು ಧರಿಸಿ ಬೆಂಕಿಯಲ್ಲಿ ಗಂಟೆಗಟ್ಟಲೆ ಧ್ಯಾನ ಮಾಡಿದರಾದರೂ ಅವರಿಗೆ ಯಾವುದೇ ಸುಟ್ಟಗಾಯ ಆಗಲಿಲ್ಲ. ಅವರ ಭಕ್ತರು ಇದನ್ನು ಪವಾಡವೆಂದು ಪರಿಗಣಿಸುತ್ತಾರೆ’’ ಎಂದು ವರದಿಯಾಗಿದೆ.

ವೈರಲ್ ವೀಡಿಯೊದಲ್ಲಿರುವ ತುಣುಕನ್ನು ಆಜ್ ತಕ್ ಅಪ್ಲೋಡ್ ಮಾಡಿರುವ ವೀಡಿಯೊದಲ್ಲಿ 2 ನಿಮಿಷ 52 ಸೆಕೆಂಡ್​ನಿಂದ ಕಾಣಬಹುದು.

ಹಾಗೆಯೆ ಈ ವೀಡಿಯೊವನ್ನು 28 ಸೆಪ್ಟೆಂಬರ್ 2012 ರಂದು ದೇವಬುದ್ಧಮ್ ಹೆಸರಿನ ಯೂಟ್ಯೂಬ್ ಚಾನಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ‘ಅಗ್ನಿ ಯೋಗಿ- ಭಕ್ತಿಯ ಆಧ್ಯಾತ್ಮಿಕ ವಿಜ್ಞಾನ’ ಎಂದು ಶೀರ್ಷಿಕೆ ನೀಡಲಾಗಿದೆ. ವೈರಲ್ ವೀಡಿಯೊವನ್ನು ಹೋಲುವ ದೃಶ್ಯಗಳನ್ನು 17:30 ನಿಮಿಷಗಳ ಟೈಮ್‌ಸ್ಟ್ಯಾಂಪ್‌ನಲ್ಲಿ ತೋರಿಸಲಾಗಿದೆ.

ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಶ್ರೀ ರಾಮಭಾವು ಸ್ವಾಮಿಗಳು ಅಗ್ನಿಯೊಂದಿಗೆ ತನ್ನನ್ನು ತಾನು ಸಂಯೋಜಿಸಿಕೊಳ್ಳುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಾಕ್ಷ್ಯಚಿತ್ರವು ಅವರ ಕಥೆಯನ್ನು ಹೇಳುತ್ತದೆ ಮತ್ತು ವೈಜ್ಞಾನಿಕ ನಿರೀಕ್ಷೆಗಳನ್ನು ಮೀರಿಸಿದೆ. ಶ್ರೀ ಗುರು ರಾಮಬಾವು ಸ್ವಾಮಿಗಳು ಕಳೆದ 45 ವರ್ಷಗಳಿಂದ ವಿಶ್ವ ಶಾಂತಿ ಮತ್ತು ಎಲ್ಲಾ ವ್ಯಕ್ತಿಗಳ ಜ್ಞಾನೋದಯಕ್ಕೆ ಸಹಾಯ ಮಾಡಲು ಈ ಅಪರೂಪದ ಮತ್ತು ವಿಶಿಷ್ಟವಾದ 14 ಗಂಟೆಗಳ ಅಗ್ನಿಹೋತ್ರವನ್ನು ಪ್ರತಿನಿತ್ಯ ನಡೆಸುತ್ತಿದ್ದಾರೆ. ಕಷ್ಟಪಟ್ಟು ತಿನ್ನುವ ಅಥವಾ ಕುಡಿಯುವ ಶ್ರೀ ಗುರುಗಳು ದಿನಕ್ಕೆ 3 ಗಂಟೆಗಳ ಕಾಲ ನಿದ್ರಿಸುತ್ತಾರೆ’’ ಎಂದು ಹೇಳಲಾಗಿದೆ.

ಈ ಸಾಕ್ಷ್ಯಚಿತ್ರವನ್ನು 2 ನವೆಂಬರ್ 2011 ರಂದು ಕೂಡ ಮತ್ತೊಂದು ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಹಾಗೆಯೆ ಈ 47 ನಿಮಿಷಗಳ ಸಾಕ್ಷ್ಯಚಿತ್ರದ DVD ಆವೃತ್ತಿಯು ಅಮೆಜಾನ್‌ನಲ್ಲಿ The Fire Yogi- A Story of an Extraordinary Journey ಎಂಬ ಹೆಸರಿನಲ್ಲಿ ಲಭ್ಯವಿದೆ. ಇದನ್ನು ಮೈಕ್ ವಾಸನ್ 2007 ರಲ್ಲಿ ರಚಿಸಿದರು.

ಫ್ಯಾಕ್ಟ್‌ಚೆಕ್, ಉರಿಯುತ್ತಿರುವ ಚಿತೆ, ವೃದ್ಧ ಮಲಗು, ವಿಡಿಯೊ, ಮಹಾಕುಂಭ, Fact check, burning pyre, old man sleeping, video, Mahakumbh,

ಅಷ್ಟೆ ಅಲ್ಲದೆ, ಕುಂಭಮೇಳ 2025 ರ ಸಮಯದಲ್ಲಿ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿರುವ ಬಗ್ಗೆ BBC ವರದಿ ಮಾಡಿದೆಯೆ ಎಂಬ ಬಗ್ಗೆ ಹುಡುಕಿದ್ದು, ಆದರೆ ಅಂತಹ ಯಾವುದೇ ವರದಿ ನಮಗೆ ಕಂಡುಬಂದಿಲ್ಲ.

ಹಾಗಾಗಿ, ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಹರಿದ್ವಾರ ಕುಂಭಮೇಳಕ್ಕೆ ಬಂದಿದ್ದ ವೃದ್ಧ ವ್ಯಕ್ತಿ ಬೆಂಕಿಯ ಮೇಲೆ ಮಲಗಿದ್ದಾರೆ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಸುಳ್ಳು ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ವೀಡಿಯೋ ಕುಂಭಮೇಳದದ್ದಲ್ಲ ಬದಲಿಗೆ ಇದು ಕೆಲವು ವರ್ಷಗಳಷ್ಟು ಹಳೆಯದ್ದಾಗಿದೆ ಎಂದು ನಾವು ಖಚಿತವಾಗಿ ಹೇಳುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ಇದನ್ನೂಓದಿ:  ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆ| ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...