Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...