Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...