Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...