Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...