Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

ಫ್ಯಾಕ್ಟ್‌ ಚೆಕ್: ಕೊವೀಡ್ ಲಸಿಕೆ ಪಡೆದ ಮೇಲೆ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿ ದೊರೆಯುತ್ತದೆಯೇ?

- Advertisement -
- Advertisement -

ಕೊರೊನಾ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಸಣ್ಣ ತಲೆನೋವು, ಸ್ವಲ್ಪ ಜ್ವರ ಅಥವಾ ಅರೆನಿದ್ರಾವಸ್ಥೆಯಿಂದ ಬಳಲುತ್ತಿರುವ ವರದಿಗಳು ಈವರೆಗೆ ಬಂದಿವೆ. ಆದರೆ, ಲಸಿಕೆಯ ಎರಡು ಡೋಸ್‌ಗಳನ್ನು ಪಡೆದ ಬಳಿಕ ದೇಹ ಮ್ಯಾಗ್ನೆಟಿಕ್ (ಅಯಸ್ಕಾಂತೀಯ) ಶಕ್ತಿಯನ್ನು ಪಡೆದುಕೊಂಡಿದೆ ಎಂಬ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳದಲ್ಲಿ ವೈರಲ್ ಆಗಿದೆ.

ಕೊವೀಡ್ ಲಸಿಕೆ ತೆಗೆದುಕೊಂಡ ನಂತರ ನಾಸಿಕ್‌ನ 71 ವರ್ಷದ ವ್ಯಕ್ತಿಯೊಬ್ಬರ ದೇಹದಲ್ಲಿ ಕಾಂತಿಯ ಶಕ್ತಿ ಬಂದಿದೆ ಎನ್ನಲಾಗಿದ್ದು, ಅವರ ತೋಳು ಮತ್ತು ಕತ್ತಿನ ಮೇಲೆ ಕಬ್ಬಿಣ, ಸ್ಟೀಲ್ ವಸ್ತುಗಳು, ನಾಣ್ಯಗಳು ಅಂಟಿಕೊಳ್ಳುತ್ತಿರುವ ವಿಡಿಯೋವನ್ನು ಮಾಧ್ಯಮಗಳಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಮಂದಿ ಹಂಚಿಕೊಂಡಿದ್ದಾರೆ.

ನಾಸಿಕ್‌ನ ಸಿಡ್ಕೊ ಪ್ರದೇಶದ ಶಿವಾಜಿ ಚೌಕ್‌ನಲ್ಲಿ ವಾಸವಿರುವ 71 ವರ್ಷದ ಅರವಿಂದ್ ಸೋನಾರ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತಯಾರಿಸಿದ ಕೊವೀಡ್ ಲಸಿಕೆ ‘ಕೋವಿಶೀಲ್ಡ್’ ನ ಎರಡನೇ ಡೋಸ್ ತೆಗೆದುಕೊಂಡ ಮೂರು ದಿನದ ನಂತರ ಉಕ್ಕಿನ, ಕಬ್ಬಿಣದ ವಸ್ತುಗಳು ತನ್ನ ದೇಹಕ್ಕೆ ಅಂಟಿಕೊಳ್ಳುತ್ತಿವೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

 

View this post on Instagram

ಸೋಷಿಯಲ್ ಮೀಡಿಯಾದಲ್ಲಿ ಉಕ್ಕಿನ ವಸ್ತುಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವ ಪ್ರಕರಣಗಳನ್ನು ನೋಡಿದ ನಂತರ, ಅರವಿಂದ್ ಕೂಡ ಪ್ರಯತ್ನಿಸಿದ್ದಾರೆ. ಆಗ ಕಬ್ಬಿಣ ಮತ್ತು ಉಕ್ಕಿನ ವಸ್ತುಗಳು, ನಾಣ್ಯಗಳು ಮತ್ತು ಚಮಚಗಳು ದೇಹಕ್ಕೆ ಅಂಟಿಕೊಳ್ಳುತ್ತಿರುವುದನ್ನು ನೋಡಿ ಆಶ್ಚರ್ಯ ಹೊಂದಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ (ಪಿಐಬಿ) ಫ್ಯಾಕ್ಟ್ ಚೆಕಿಂಗ್ ಘಟಕ ‘ಪಿಐಬಿ ಫ್ಯಾಕ್ಟ್ ಚೆಕ್’ ಈ ಘಟನೆಗಳು “ಆಧಾರರಹಿತ” ಎಂದು ಕರೆದಿದೆ.

’ಲಸಿಕೆಗಳು ಮಾನವ ದೇಹದಲ್ಲಿ ಕಾಂತೀಯ ಪ್ರತಿಕ್ರಿಯೆಯನ್ನು ಉಂಟುಮಾಡಲು ಸಾಧ್ಯವಿಲ್ಲ. ಕೊರೊನಾ ಲಸಿಕೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ಯಾವುದೇ ಲೋಹ ಆಧಾರಿತ ಪದಾರ್ಥಗಳನ್ನು ಹೊಂದಿರುವುದಿಲ್ಲ. ಲಸಿಕೆ ಪಡೆದ ಮೇಲೆ ಸ್ವಲ್ಪ ತಲೆನೋವು, ಇಂಜೆಕ್ಷನ್ ಕೊಟ್ಟ ಭಾಗದಲ್ಲಿ ನೋವು ಅಥವಾ ಸಣ್ಣ ಜ್ವರ ಮುಂತಾದ ಲಘು ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ: ಹಿಂದೂ ಸಂಘಟನೆಗಳ ವಿರೋಧ: ಮಸೀದಿ, ಮದರಸಾಗಳಿಗೆ ಬಿಡುಗಡೆ ಮಾಡಿದ್ದ ಗೌರವಧನ ಹಿಂಪಡೆದ ಸರ್ಕಾರ

 

ಇನ್ನು, ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ’ಕೊವೀಡ್ ಲಸಿಕೆಗಳು ಚುಚ್ಚುಮದ್ದು ಪಡೆದ ಸ್ಥಳದಲ್ಲಿ  ಅಯಸ್ಕಾಂತೀಯ ಗುಣವನ್ನು ಉತ್ಪಾದಿಸುವ ಅಂಶಗಳನ್ನು ಒಳಗೊಂಡಿಲ್ಲ. ಎಲ್ಲಾ ಲಸಿಕೆಗಳು ಕಬ್ಬಿಣ, ನಿಕಲ್, ಕೋಬಾಲ್ಟ್, ಲಿಥಿಯಂ ಮತ್ತು ಅಪರೂಪದ ಭೂಮಿಯ ಮಿಶ್ರಲೋಹಗಳಂತಹ ಲೋಹಗಳಿಂದ ಮುಕ್ತವಾಗಿವೆ’ ಎಂದು ವಿವರಿಸಿದೆ. ಡಬ್ಲ್ಯುಎಚ್‌ಒ ಸಹ ಅದನ್ನೇ ಹೇಳಿದೆ.

ನಾಸಿಕ್‌ ವ್ಯಕ್ತಿಯ ದೇಹಕ್ಕೆ ಕಬ್ಬಿಣ, ಸ್ಟೀಲ್‌ ವಸ್ತುಗಳು ಅಂಟಿಕೊಳ್ಳುವುದಕ್ಕೂ, ಅವರು ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಅವರ ಮನೆಗೆ ಹೋಗಿ ಪರಿಶೀಲಿಸಿದ್ದೇವೆ. ಅವರ ಆರೋಗ್ಯದ ಸೂಚ್ಯಂಕಗಳು ಸರಿಯಾಗಿವೆ. ಈ ಕುರಿತು ನಾವು ವಿವರವಾದ ವರದಿ ತಯಾರಿಸುತ್ತೇವೆ ಎಂದು ನಾಸಿಕ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

“ಸಾಮಾಜಿಕ ಜಾಲತಾಣದಲ್ಲಿ ನಾನು ಈ ರೀತಿಯ ವಿಡಿಯೋ ನೋಡಿದ್ದೆ. ಹಾಗಾಗಿ ಎರಡೂ ಡೋಸ್ ಲಸಿಕೆ ಪಡೆದ ನಮ್ಮ ತಂದೆ ತಾಯಿಯ ಮೇಲೆ ಸ್ಟೀಲ್ ಚಮಚಗಳು ಮತ್ತು ನಾಣ್ಯಗಳನ್ನು ಅಂಟಿಸಲು ಯತ್ನಿಸಿದೆ. ನಮ್ಮ ತಂದೆಯ ದೇಹದ ಮೇಲೆ ಅವು ಅಂಟಿಕೊಂಡವು, ನಮ್ಮ ತಾಯಿಯ ದೇಹದ ಮೇಲಲ್ಲ” ಎಂದು ಸೋನಾರ್‌ರವರ ಮಗ ಜಯಂತ್ ತಿಳಿಸಿದ್ದಾರೆ.

ಈ ಕುರಿತು ವಿವರವಾದ ಅಧ್ಯಯನ, ಸಂಶೋಧನೆ ನಡೆಸಲು ಸ್ಥಳೀಯ ಕಾರ್ಯಕರ್ತರು, ವೈದ್ಯರು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆಗಾಗಿ ಆನ್‌ಲೈನ್ ನೋಂದಣಿ: ಇಂಟರ್‌ನೆಟ್ ಇಲ್ಲದವರಿಗೂ ಬದುಕುವ ಹಕ್ಕಿದೆ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...