Homeಫ್ಯಾಕ್ಟ್‌ಚೆಕ್FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

FACT CHECK : ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೂ ಮತ ಚಲಾಯಿಸಬಹುದೇ?

- Advertisement -
- Advertisement -

‘ಚಾಲೆಂಜ್ ವೋಟ್‌ ಮತ್ತು ಟೆಂಡರ್ಡ್‌ ವೋಟ್‌’ (Challenge vote and Tender vote) ಕುರಿತು ವಿವರಿಸಿದ ಚುನಾವಣಾ ಜಾಗೃತಿಯದ್ದು ಎನ್ನಲಾದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ಸಂದೇಶದಲ್ಲಿ ಈ ಕೆಳಗಿನಂತೆ ಬರೆಯಲಾಗಿದೆ..

“ನೀವು ಮತಗಟ್ಟೆಗೆ ತೆರಳಿದಾಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಮ್ಮ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಸೆಕ್ಷನ್ 49ಪಿ ಅಡಿಯಲ್ಲಿ ‘ಚಾಲೆಂಜ್ ವೋಟ್’ ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ.”

“ಯಾರಾದರೂ ಈಗಾಗಲೇ ನಿಮ್ಮ ಮತವನ್ನು ಚಲಾಯಿಸಿದ್ದಾರೆ ಎಂಬುವುದು ನಿಮಗೆ ಗೊತ್ತಾದರೆ, ನಂತರ “ಟೆಂಡರ್ಡ್‌ ವೋಟ್” ಅನ್ನು ಕೇಳಿ ಮತ್ತು ನಿಮ್ಮ ಮತವನ್ನು ಚಲಾಯಿಸಿ”.

“ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ಮತಗಳು ದಾಖಲಾದರೆ, ಅಂತಹ ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲಾಗುತ್ತದೆ”.

ಪೋಸ್ಟ್‌ ಲಿಂಕ್‌ ಇಲ್ಲಿದೆ

ಫ್ಯಾಕ್ಟ್‌ಚೆಕ್ : ‘ಚಾಲೆಂಜ್ ವೋಟ್ ಮತ್ತು ಟೆಂಡರ್ಡ್‌ ವೋಟ್’ ಬಗ್ಗೆ ವೈರಲ್ ಸಂದೇಶದಲ್ಲಿ ಉಲ್ಲೇಖಿಸಿರುವುದರಿಂದ ನಾವು ಮೊದಲು ಚಾಲೆಂಜ್ ವೋಟ್‌ ಬಗ್ಗೆ ಮಾಹಿತಿ ಹುಡುಕಿದ್ದೇವೆ. ಈ ವೇಳೆ 9 ಮೇ 2019 ರಂದು ಡೆಕ್ಕನ್ ಹೆರಾಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಸುದ್ದಿಯೊಂದು ನಮಗೆ ದೊರೆತಿದೆ. ಈ ಸುದ್ದಿಯಲ್ಲಿ “ಚಾಲೆಂಜ್ ವೋಟ್‌ ಎನ್ನುವುದು ಮತಗಟ್ಟೆಯಲ್ಲಿ ನಡೆಯುವ ಒಂದು ಪ್ರಕ್ರಿಯೆಯಾಗಿದೆ. ಮತಗಟ್ಟೆಯಲ್ಲಿ ಕುಳಿತ ಚುನಾವಣಾ ಏಜೆಂಟ್ ಯಾವುದೇ ಮತದಾರರ ಗುರುತಿನ ಕುರಿತು ಪ್ರಶ್ನಿಸುವುದಾಗಿದೆ. ಅಂದರೆ, ಮತದಾರರು ತನ್ನ ಗುರುತಿನ ಕುರಿತು ಸುಳ್ಳು ಹೇಳುತ್ತಿದ್ದಾರೆ ಎನ್ನುವುದಾಗಿ” ಎಂದಿದೆ.

ನಾವು ಇನ್ನಷ್ಟು ಹುಡುಕಿದಾದ ತ್ರಿಪುರಾದ ಮುಖ್ಯ ಚುನಾವಣಾ ಅಧಿಕಾರಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ 2023ರ ಚುನಾವಣಾ ಆಯೋಗದ ಕೈಪಿಡಿ ದೊರೆತಿದೆ. ಅದರಲ್ಲಿ ಚಾಲೆಂಜ್ ವೋಟ್ ಎಂದರೆ “ಮತಗಟ್ಟೆಯಲ್ಲಿ ಕುಳಿತಿ ಚುನಾವಣಾ ಏಜೆಂಟ್ 2 ರೂಪಾಯಿ ನಗದು ಠೇವಣಿ ಮಾಡುವ ಮೂಲಕ ಯಾವುದೇ ಮತದಾರರ ಗುರುತಿನ ಕುರಿತು ಚಾಲೆಂಜ್ ಮಾಡಬಹುದು. ಈ ವೇಳೆ ಸಣ್ಣ ವಿಚಾರಣೆಯ ಮೂಲಕ ಚಾಲೆಂಜ್ ಅನ್ನು ನಿರ್ಧರಿಸಬೇಕು. ಒಂದು ವೇಳೆ ಮತದಾರರ ವಿರುದ್ದದ ಚಾಲೆಂಜ್‌ ಸಮರ್ಥಿನಿಯ ಅಲ್ಲ ಎಂದು ಕಂಡು ಬಂದರೆ, ಆ ಮತದಾರರಿಗೆ ಮತ ಚಲಾಯಿಸಲು ಅವಕಾಶ ನೀಡಬೇಕು. ಮತದಾರರ ಗುರುತಿನ ಕುರಿತ ಚಾಲೆಂಜ್ ಸಮರ್ಥಿನಿವಾಗಿದ್ದೆ (ಮತದಾರರ ಗುರುತು ಸುಳ್ಳಾಗಿದ್ದರೆ) ಅವರಿಗೆ ಮತ ಚಲಾಯಿಸಲು ಅವಕಾಶ ನೀಡಬಾರದು ಮತ್ತು ಲಿಖಿತ ದೂರಿನ ಮೂಲಕ ಪೊಲೀಸರಿಗೆ ಹಸ್ತಾಂತರಿಸಬೇಕು” ಎಂದಿದೆ.


“ಒಬ್ಬರು ಮತದಾರರನ್ನು ನಕಲಿ ಎಂದು ಸೂಚಿಸಲು ಬಲವಾದ ಆಧಾರಗಳಿಲ್ಲದಿದ್ದರೆ, ಅವರನ್ನು ನಿಜವಾದ ಮತದಾರರೆಂದು ಪರಿಗಣಿಸಬೇಕು. ಅಂತಹ ಯಾವುದೇ ಪ್ರಕರಣವನ್ನು ಸಾರಾಂಶ ವಿಚಾರಣೆಯ (ಪ್ರಾಥಮಿಕ ವಿಚಾರಣೆ) ಮೂಲಕ ನಿರ್ಧರಿಸಬೇಕು” ಎಂದು ಕೈಪಿಡಿಯಲ್ಲಿ ಸೇರಿಸಲಾಗಿದೆ.

theprint.in ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸುದ್ದಿಯಲ್ಲಿ “1961ರ ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ಚಾಲೆಂಜ್ ವೋಟ್‌ ಬಗ್ಗೆ ಯಾವುದೇ ಉಲ್ಲೇಖ ನಮಗೆ ಕಂಡು ಬಂದಿಲ್ಲ” ಎಂದು ಹೇಳಿದೆ.

ವಿಭಾಗ 49ಪಿ ಎಂದರೇನು?

“1961ರ ಚುನಾವಣಾ ನಿಯಮಗಳ ನಡವಳಿಕೆಯ ವಿಭಾಗ 49 ಪಿಯಲ್ಲಿ ‘ಟೆಂಡರ್ಡ್‌ ವೋಟ್‌’ ಬಗ್ಗೆ ಹೇಳಲಾಗಿದೆ. ಈ ನಿಯಮದ ಪ್ರಕಾರ ಒಬ್ಬ ವ್ಯಕ್ತಿಯು ಮತದಾನ ಮಾಡಿ ಹೋದ ಬಳಿಕ, ಅದೇ ಗುರುತಿನಲ್ಲಿ ಮತ್ತೊಬ್ಬ ಮತ ಚಲಾಯಿಸಲು ಬಂದರೆ, ಆತನಲ್ಲಿ ಮತಗಟ್ಟೆಯ ಚುನಾವಣಾ ಅಧಿಕಾರಿ ಕೆಲವೊಂದು ಸಾಮಾನ್ಯ ಪ್ರಶ್ನೆಗಳನ್ನು ಕೇಳಬಹುದು. ಆತ ನೀಡಿದ ಉತ್ತರ ತೃಪ್ತಿಕರವಾದರೆ, ಮತಯಂತ್ರದ ಮೂಲಕ ಮತ ಚಲಾಯಿಸಲು ಅನುಮತಿಸುವ ಬದಲು, ಪ್ರತ್ಯೇಕವಾಗಿ ವಿನ್ಯಾಸ ಮಾಡಿರುವ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಬೇಕು. ಬ್ಯಾಲೆಟ್ ಪೇಪರ್‌ ಚುನಾವಣಾ ಆಯೋಗ ನಿಗದಿಪಡಿಸಿದ ನಿರ್ದಿಷ್ಟ ಭಾಷೆಯಲ್ಲಿರಬೇಕು”

ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ?

ಯಾವುದೇ ಮತಗಟ್ಟೆಗಳಲ್ಲಿ ಶೇ.14ಕ್ಕಿಂತ ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್‌ನಲ್ಲಿ ಹೇಳಲಾಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವ theprint.in “ನಾವು 1961ರ ಚುನಾವಣಾ ನಿಯಮಗಳು ಮತ್ತು ಚುನಾವಣಾಧಿಕಾರಿಗಳ ಕೈಪಿಡಿಯನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಎಲ್ಲಿಯೂ ಶೇ.14ಕ್ಕಿಂತ ಹೆಚ್ಚು ‘ಟೆಂಡರ್ಡ್‌ ವೋಟ್’ ಚಲಾವಣೆಯಾದರೆ ಮರು ಮತದಾನ ಮಾಡುವ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣಾ ಆಯೋಗವೂ ಈ ಕುರಿತು ಯಾವುದೇ ಅಧಿಕೃತ ಅಧಿಸೂಚನೆ ಹೊರಡಿಸಿಲ್ಲ. ಟೆಂಡರ್ಡ್‌ ಮತಗಳ ಕಾರಣದಿಂದಾಗಿ ಮರು ಮತದಾನದ ನಡೆಸಿದ ಕುರಿತು ಯಾವುದೇ ವಿಶ್ವಾಸಾರ್ಹ ಸುದ್ದಿ ವರದಿಗಳು ನಮಗೆ ಕಂಡು ಬಂದಿಲ್ಲ ಎಂದು ತಿಳಿಸಿದೆ.

theprint.in ನ ಫ್ಯಾಕ್ಟ್‌ಚೆಕ್ ವರದಿ ಲಿಂಕ್ ಇಲ್ಲಿದೆ 

ವರದಿಗಳ ಪ್ರಕಾರ, ಟೆಂಡರ್ಡ್‌ ಮತಗಳನ್ನು ಮುಖ್ಯ ಮತಗಳ ಎಣಿಕೆ ವೇಳೆ ಪರಿಗಣಿಸುವುದಿಲ್ಲ. ನ್ಯಾಯಾಂಗದ ಪ್ರಕಾರ, ಟೆಂಡರ್ಡ್‌ ಮತಗಳು ಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವಾಗ ಮಾತ್ರ, ಅಂದರೆ, ಗೆಲುವಿನ ಅಂತರವು ಕಡಿಮೆ ಇದ್ದಾಗ ಮಾತ್ರ ಪರಿಗಣಿಸಲಾಗುತ್ತದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಿರುವ ಅಂಶವೇನೆಂದರೆ, ವೈರಲ್ ಪೋಸ್ಟ್‌ನಲ್ಲಿ ಚಾಲೆಂಜ್ ವೋಟ್‌ ಬಗ್ಗೆ ನೀಡಿರುವ ಮಾಹಿತಿ ತಪ್ಪು. ಇನ್ನು ಟೆಂಡರ್ಡ್‌ ವೋಟ್‌ ಹಾಕಬಹುದಾದರೂ, ಯಾವುದೇ ಮತಗಟ್ಟೆಯಲ್ಲಿ ಶೇ.14ಕ್ಕಿಂತ ಹೆಚ್ಚು ಟೆಂಡರ್ಡ್‌ ವೋಟ್‌ ಚಲಾವಣೆಯಾದರೆ, ಅಲ್ಲಿ ಮರು ಮತದಾನ ಮಾಡುವ ಬಗ್ಗೆಯೂ ಉಲ್ಲೇಖವಿಲ್ಲ.

ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ನೀಡಿರುವ ಮಾಹಿತಿಯು ಬಹುತೇಕ ನಾವು ಸ್ವತಃ ಹುಡುಕಾಡಿದಾಗ ದೊರೆತ ಪತ್ರಿಕಾ ವರದಿಗಳು ಮತ್ತು ಚುನಾವಣಾ ಆಯೋಗದ ಪ್ರಕಟಣೆಗಳನ್ನು ಒಳಗೊಂಡಿದೆ. ಇನ್ನೂ ಕೆಲ ಮಾಹಿತಿಗಳನ್ನು theprint.in ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯನ್ನು ಆಧರಿಸಿವೆ. theprint.in ನ ಫ್ಯಾಕ್ಟ್‌ಚೆಕ್ ವರದಿಯನ್ನು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಸುಳ್ಳು ಸುದ್ದಿಯ ಬಗೆಗಿನ ಈ ಬರಹವನ್ನು ಓದಿ’ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, theprint.in ನ ವರದಿಯಲ್ಲಿ ಹೇಳಲಾದ ಅಂಶಗಳು ಸರಿಯಾಗಿದೆ ಎಂದು ನಾವು ನಂಬಿದ್ದೇವೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯ ಎಕ್ಸ್ ಪೋಸ್ಟ್ ಲಿಂಕ್ ಇಲ್ಲಿದೆ

ಇದನ್ನೂ ಓದಿ : FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...